Breaking News

ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯ – ವಿ. ಮನೋಹರ್

cnewstv.in / 08.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ: ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ವಿ.ಮನೋಹರ್ ಹೇಳಿದ್ದಾರೆ.

ಇಂದು ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ದಸರಾ ಚಲನಚಿತ್ರೋತ್ಸವ -2021 ಉದ್ಘಾಟಿಸಿ ಮಾತನಾಡಿದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್, ಸಿನಿಮಾ ಎನ್ನುವುದು ಸಿನಿ ಕಲಾವಿದರಿಗೆ ತಾಯಿ ಇದ್ದ ಹಾಗೇ. ಶಿವಮೊಗ್ಗ ಜಿಲ್ಲೆ ಪ್ರಕೃತಿ ಮಾತೆಯ ಪುಣ್ಯ ಕ್ಷೇತ್ರವಾಗಿದೆ. ಕಲಾವಿದರಿಗೆ ತಾಯಿ ಇದ್ದಂತೆ. ಇಲ್ಲಿ ಅನೇಕ ಸಾಹಿತ್ಯ ದಿಗ್ಗಜರು ಮತ್ತು ಕಲಾವಿದರು ಜನ್ಮ ತಾಳಿದ್ದು, ಸಿನಿಮಾ ರಂಗಕ್ಕೆ ಶಿವಮೊಗ್ಗದ ಕೊಡುಗೆ ಅಪಾರ. ಇಲ್ಲಿಯ ಜನ ಕಲೆಯ ಆರಾಧಕರು ಮತ್ತು ಕಲಾವಿದರಿಗೆ ಅನ್ನದಾತರು ಆಗಿದ್ದಾರೆ ಎಂದರು.

ದಸರಾ ಸಂದರ್ಭದಲ್ಲಿ ಈ ರೀತಿಯ ಕಾರ್ಯಕ್ರಮ ಏರ್ಪಡಿಸಿ ಚಿತ್ರ ಕಲಾವಿದರನ್ನು ಗೌರವಿಸುತ್ತಿರುವುದು ಕಲಾವಿದರಲ್ಲಿ ಸ್ಪೂರ್ತಿ ತಂದಿದೆ. ಅಲ್ಲದೇ, ಇವತ್ತಿನ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿರುವ ಚಲನಚಿತ್ರ ಮತ್ತು ಕಿರುತೆರೆಯ ಅಭಿನಯಿಸುವ ದಂಪತಿಗಳಾದ ಸುಂದರ್ ಮತ್ತು ವೀಣಾ ಸುಂದರ್, ಗಾಯಕ, ಸಂಗೀತ ಸಂಯೋಜನಕ ವಾಸುಕಿ ವೈಭವ್, ಕಲಾವಿದ ಶಿವಮೊಗ್ಗ ರಾಮಣ್ಣ ಎಲ್ಲರೂ ಕೂಡ ಚಿತ್ರರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನು ಒದಿ : https://cnewstv.in/?p=6382

ಧಾರಾವಾಹಿಯ ಒಂದು ಎಪಿಸೋಡ್ ಒಂದು ಸಿನಿಮಾಕ್ಕೆ ಸಮ. ಅಂತಹ ಧಾರಾವಾಹಿಯ ಮಧ್ಯದಲ್ಲಿ ಬರುವ ಜಾಹೀರಾತುಗಳು ಮುಗಿದ ಮೇಲೆ ಚಾನೆಲ್ ಬದಲಿಸದೇ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಸಂಭಾಷಣೆಕಾರ ಸುಂದರ್ ಅವರಾಗಿದ್ದು, ಅತ್ಯಂತ ಬೇಡಿಕೆಯ ಪೋಷಕ ನಟರಾಗಿದ್ದಾರೆ. ವೀಣಾ ಸುಂದರ್ ಕೂಡ ಅತ್ಯುತ್ತಮ ಕಲಾವಿದೆ. ಶಿವಮೊಗ್ಗ ರಾಮಣ್ಣ ಎಲೆಮರೆ ಕಾಯಿಯಾಗಿ ಸಾವಿರಾರು ಕಲಾವಿದರಿಗೆ ಅವಕಾಶ ಕೊಟ್ಟವರು. ಮತ್ತು ವಾಸುಕಿ ವೈಭವ್ ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ದೊಡ್ಡ ಸಾಹಿತಿಗಳ ಸಾಹಿತ್ಯವನ್ನು ಅರಗಿಸಿಕೊಂಡವರು. ಇಂತಹ ಪ್ರತಿಭೆಗಳನ್ನು ಗುರುತಿಸಿ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟಿರುವುದು ಶಿವಮೊಗ್ಗದ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಕಲಾವಿದರನ್ನು ಗೌರವಿಸುವುದರಿಂದ ಅವರಿಗೆ ಸ್ಪೂರ್ತಿ ಸಿಗುತ್ತದೆ. ಸಿನಿಮಾ ರಂಗ ಕಳೆದ ಎರಡು ವರ್ಷಗಳಲ್ಲಿ ತಡೆಯಲಾಗದಷ್ಟು ಹೊಡೆತ ಬಿದ್ದಿದ್ದು, ಸಿನಿಮಾ ಕಲಾವಿದರಿಗೆ ಆನ್ ಲೈನ್ ಜೀವನ ಇಲ್ಲ. ಜನ ಚಿತ್ರಮಂದಿರಕ್ಕೆ ಬಂದಾಗ ಮಾತ್ರ ಸಿನಿಮಾ ಕಲಾವಿದರಿಗೆ ಬದುಕು. ದಸರಾ ಸಂದರ್ಭದಲ್ಲಿ ಆ ದೇವಿಯು ಎಲ್ಲರಿಗೂ ಆರೋಗ್ಯ ನೀಡಲಿ, ಕೋವಿಡ್ ಸಂಹಾರ ಮಾಡಲಿ ಎಂದು ಹಾರೈಸಿದರು. – ವೀಣಾ ಸುಂದರ್

ಮನುಷ್ಯನ ಎಲ್ಲ ಬೇಕು ಬೇಡಗಳನ್ನು ಪೂರೈಸಿದ ನಂತರ ಕಟ್ಟಕಡೆಗೆ ಸಿನಿಮಾ ಕ್ಷೇತ್ರದ ಕಡೆಗೆ ಬರುವಂತಹುದು. ನಾವೆಲ್ಲರೂ ಅನಿವಾರ್ಯವಾಗಿ ಆ ಕ್ಷೇತ್ರದಲ್ಲೇ ಇದ್ದೇವೆ. ಕನ್ನಡ ಸಿನಿಮಾಕ್ಕೆ ಶಿವಮೊಗ್ಗ ಜಿಲ್ಲೆ ಬೇರು. ಸಿನಿಮಾವನ್ನು ಪ್ರೋತ್ಸಾಹಿಸುವುದು ಕೂಡ ಶಿವಮೊಗ್ಗದಂತಹ ಜಿಲ್ಲೆಗಳೇ. ಈ ಕ್ಷೇತ್ರವನ್ನು ಪ್ರೋತ್ಸಾಹಿಸಿ ಎಂದು ಮನವಿ ಮಾಡಿದರು. – ಸುಂದರ್

ಇದನ್ನು ಓದಿ : https://cnewstv.in/?p=6377

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments