cnewstv.in /15.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಮೀ ಶಮೀಯತೇ ಪಾಪಂ ಶಮೀ ಶತ್ರುವಿನಾಶಿನೀ |
ಅರ್ಜುನಸ್ಯ ಧನುರ್ಧಾರೀ
ರಾಮಸ್ಯ ಪ್ರಿಯದರ್ಶನೀ ||
ಕರಿಷ್ಯಮಾಣಯಾತ್ರಾಯಾ ಯಥಾಕಾಲಂ ಸುಖಂ ಮಯಾ|
ತತ್ರ ನಿರ್ವಿಘ್ನಕತ್ರಿತ್ವಂ ಭವ ಶ್ರೀರಾಮಪೂಜಿತಾ ||
ನಾಡಹಬ್ಬ ದಸರಾ ಅಂಗವಾಗಿ ಇಂದು ನಗರದ ಫ್ರೀಡಂ ಪಾರ್ಕಿನಲ್ಲಿ ಸಾಂಪ್ರದಾಯಿಕವಾಗಿ ಬನ್ನಿಮಂಟಪ ನಿರ್ಮಿಸಲಾಗಿತ್ತು. ಸಾಂಪ್ರದಾಯಿಕ ಕತ್ತಿಯಿಂದ ತಹಶೀಲ್ದಾರ್ ನಾಗರಾಜ್ ಅವರು ಅಂಬು ಕಡಿದರು. ನಂತರ ನಿರ್ಮಿಸಲಾಗಿದ್ದ ರಾವಣನ ಪ್ರತಿಕೃತಿಯನ್ನು ದಹಿಸಿ, ಪಟಾಕಿಗಳನ್ನು ಸಿಡಿಸಲಾಯಿತು. ಎಲ್ಲಾ ದೃಶ್ಯವನ್ನು ನೆರೆದಿದ್ದ ಸಾವಿರಾರು ಜನರು ಕಣ್ತುಂಬಿಕೊಂಡರು.
ಎಂದಿನಂತೆ ಈ ವರ್ಷವೂ ಸಹ ಸಂಪ್ರದಾಯದ ಹಾಗೆ ಅಂಬು ಕಡಿದ ನಂತರ ಮಳೆಯಾಗಿದೆ. ಆದರೆ ಪ್ರತಿ ವರ್ಷಕ್ಕಿಂತಲೂ ಈ ಬಾರಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಇದನ್ನು ಓದಿ : https://cnewstv.in/?p=6461
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv