ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ವೀರ ಚಕ್ರ ಪ್ರಶಸ್ತಿ.

Cnewstv.in / 22.11.2021/ ನವದಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ: ಫೆಬ್ರವರಿ 2019 ರಲ್ಲಿ ಬಾಲಕೋಟ್ ಮೇಲಿನ ವೈಮಾನಿಕ ಕಾಳಗದಲ್ಲಿ ಪಾಕಿಸ್ಥಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ರವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರವರು ಇಂದು ವೀರ ಚಕ್ರವನ್ನು ಪ್ರದಾನ ಮಾಡಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಧಮಾನ್ ಅಭಿನಂದನ್ ಅವರ ಸಾಹಸ ಮತ್ತು ಸೇವೆಯನ್ನು ಗೌರವಿಸಲಾಯಿತು. ಪರಮವೀರ ಚಕ್ರದ ಬಳಿಕ ವೀರಚಕ್ರ ಮೂರನೇ ಅತ್ಯುನ್ನತ ಶೌರ್ಯ ಪದಕವಾಗಿದೆ. ಈ ಹಿನ್ನೆಲೆ ಅಭಿನಂದನ್ ಅವರಿಗೆ ರಾಮನಾಥ್ ಕೋವಿಂದ್ ಅವರು ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಿದ್ದರು.

ಅಭಿನಂದನ್ ಅವರು ಎಫ್ -16 ಅನ್ನು ಹೊಡೆದುರುಳಿಸಿದ ಏಕೈಕ ಮಿಗ್ -21 ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಘಟನೆಯ ಬಳಿಕ ಭಾರತೀಯ ವಾಯುಪಡೆ ಈ ಹಿಂದೆ ಅಭಿನಂದನ್ ಅವರನ್ನು ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ನೀಡಿತ್ತು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ F-16 ಅನ್ನು ಹೊಡೆದುರುಳಿಸಿದ ಬಳಿಕ ಅಭಿನಂದನ್ ಅವರಿದ್ದ ವಿಮಾನವನ್ನೂ ಪಾಕಿಸ್ಥಾನ ಪಡೆಗಳು ಹೊಡೆದುರುಳಿಸಿ ಅವರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು.ಆಗ ಅವರು ವಿಂಗ್ ಕಮಾಂಡರ್ ಆಗಿದ್ದರು.

ಫೆಬ್ರವರಿ 27, 2019 ರಂದು ಪಾಕಿಸ್ತಾನದ ವಾಯುಪಡೆಯ ವೈಮಾನಿಕ ದಾಳಿಯನ್ನು ತಡೆಯುವಲ್ಲಿನ ಪಾತ್ರಕ್ಕಾಗಿ ಅಭಿನಂದನ್ ಅವರ ಘಟಕ 51 ಸ್ಕ್ವಾಡ್ರನ್ ಯುನಿಟ್ ನ ಪಾತ್ರವನ್ನೂ ಕೂಡ ಉಲ್ಲೇಖಿಸಲಾಗಿದೆ. ಸಿಆರ್‌ಪಿಎಫ್ ಬೆಂಗಾವಲು ಪಡೆಗಳ ಮೇಲೆ ಜೈಶ್-ಎ-ಮೊಹಮ್ಮದ್ ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ದಾಳಿ ಯನ್ನು ನಡೆಸಿ ದಿಟ್ಟ ಪ್ರತ್ಯುತ್ತರ ನೀಡಿತ್ತು.

ಇದನ್ನು ಒದಿ : https://cnewstv.in/?p=6854

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments