ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲ ನೀಡಿದ ಏಷ್ಯನ್ ಅಭಿವೃದ್ಧಿ ಬ್ಯಾಂಕ್.

Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲ ನೀಡಿದ ಏಷ್ಯನ್ ಅಭಿವೃದ್ಧಿ ಬ್ಯಾಂಕ್.

ನವದೆಹಲಿ: ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಭಾರತಕ್ಕೆ ಕೋವಿಡ್ 19 ಲಸಿಕೆಗಳನ್ನು ಖರೀದಿಸುವುದಕ್ಕಾಗಿ 1.5 ಬಿಲಿಯನ್ (11,185 ಕೋಟಿ) ರೂಪಾಯಿಗಳ ಸಾಲವನ್ನು ಅನುಮೋದಿಸಿದೆ.

ಈ ಸಂಬಂಧ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಪ್ರಕಟಣೆ ಮಾಡಿದ್ದು, ಇದೇ ಯೋಜನೆಗಾಗಿ ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಎಐಐಬಿ) ಹೆಚ್ಚುವರಿ 500 ಮಿಲಿಯನ್ ಡಾಲರ್ ನೀಡುವ ನಿರೀಕ್ಷೆ ಇದೆ ಎಂದು ಎಡಿಬಿ ಹೇಳಿದೆ. ಬೀಜಿಂಗ್ ಮೂಲದ ಎಐಐಬಿ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ ಆಗಿದ್ದು ಏಷ್ಯಾವನ್ನು ಅಭಿವೃದ್ಧಿಪಡಿಸುವ ಬ್ಯಾಂಕ್ ಆಗಿದೆ.

ಎಡಿಬಿಯಿಂದ ಪಡೆಯಲಾಗಿರುವ ಆರ್ಥಿಕ ನೆರವಿನಿಂದ 66.7 ಕೋಟಿ ಕೋವಿಡ್-19 ಲಸಿಕೆ ಡೋಸ್ ಗಳನ್ನು ಖರೀದಿಸಬಹುದಾಗಿದ್ದು 31.7 ಕೋಟಿ ಮಂದಿಗೆ ನೀಡಬಹುದಾಗಿದೆ.

18 ವರ್ಷಗಳ ಮೇಲ್ಪಟ್ಟ 94.47 ಕೋಟಿ ಮಂದಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡುವ ಭಾರತದ ರಾಷ್ಟ್ರೀಯ ನಿಯೋಜನೆ ಮತ್ತು ವ್ಯಾಕ್ಸಿನೇಷನ್ ಯೋಜನೆಗೆ ಎಡಿಬಿ ಆರ್ಥಿಕ ನೆರವು ಬೆಂಬಲವಾಗಿದೆ. ಎಡಿಬಿಯಿಂದ 4 ಮಿಲಿಯನ್ (ಅಂದಾಜು 30 ಕೋಟಿ ರೂಪಾಯಿ) ತಾಂತ್ರಿಕ ನೆರವು ಯೋಜನೆ ದೇಶದಲ್ಲಿ ಈಗಾಗಲೇ ಚಾಲ್ತಿಯಲ್ಲಿದೆ ಎಂದು ಎಡಿಬಿ ತಿಳಿಸಿದೆ.

ಇದನ್ನು ಒದಿ : https://cnewstv.in/?p=6909

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments