Cnewstv.in / 04.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೃಷಿ ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೃಷಿ ವಿಶ್ವವಿದ್ಯಾನಿಲಯದ ಹಣಕಾಸು ವಿಭಾಗದ ಗಣೇಶಪ್ಪ ಎಂಬುವನು ಬಾಡಿಗೆ ವಾಹನದ ಹಣ ಬಿಡುಗಡೆ ಮಾಡುವುದಕ್ಕೆ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ನವೀನ ಎಂಬುವವರು ಕೃಷಿ ವಿವಿಗೆ ವಾಹನಗಳನ್ನು ಬಾಡಿಗೆ ಬಿಟ್ಟಿದ್ದರು. ಅದರ ಬಿಲ್ ಒಂದು ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಕ್ಕಾಗಿ ಗಣೇಶಪ್ಪ ಐದು ಸಾವಿರ ರೂಪಾಯಿಗಳನ್ನು ಡಿಮ್ಯಾಂಡ್ ಮಾಡಿದ್ದರು. ಆ ಹಣವನ್ನು ಪಡೆಯುವ ಸಮಯದಲ್ಲಿ ಅಧಿಕಾರಿಗಳ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾನೆ.
ಇದನ್ನು ಒದಿ : https://cnewstv.in/?p=7046
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv