Breaking News

ಮೋದಿಯವರ ಆಯುಷ್ಯ, ಆರೋಗ್ಯ, ವೃದ್ಧಿಗಾಗಿ ಮಹಾ ಮೃತ್ಯುಂಜಯ ಯಾಗ

Cnewstv.in / 17.01.2022 / ಬೆಳ್ತಂಗಡಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ.

ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ನೆರವೇರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಇಂದು ಬೆಳಗ್ಗೆ 7ಗಂಟೆಯಿಂದ ಚತುರ್ವೇದ ಪಾರಾಯಣ ಪ್ರಾರಂಭಿಸಿ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಮಹಾಮೃತ್ಯುಂಜಯ ಹೋಮ ನಡೆಸಲಾಗುತ್ತಿದೆ.

ಇದನ್ನು ಒದಿ : https://cnewstv.in/?p=7658

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*