Breaking News

ಕೊರೋನ ಸೋಂಕಿನ ಪ್ರಮಾಣವನ್ನಾಧರಿಸಿ ನಗರದ ಮಾರಿಕಾಂಬ ಜಾತ್ರೆ.

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕೊರೋನ ಸೋಂಕಿನ ಪ್ರಮಾಣವನ್ನಾಧರಿಸಿ ನಗರದ ಮಾರಿಕಾಂಬ ಜಾತ್ರೆ.

ಶಿವಮೊಗ್ಗ : ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಶಿವಮೊಗ್ಗ ನಗರದ ಸುಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೋತ್ಸವವು ಕೊರೋನ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 22 ಮತ್ತು 23ರಂದು ನಡೆಸಲು ಜಾತ್ರಾ ಸಮಿತಿಯು ನಿರ್ಧರಿಸಿದೆ.

ಸೋಂಕಿನ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಂದಿನ ಸ್ಥಿತಿಗಳನ್ನಾಧರಿಸಿ ಜಾತ್ರೆ ನಡೆಸಲು ಕ್ರಮ ವಹಿಸಲಾಗುವುದು. ಸೋಂಕು ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗಿದ್ದರೆ ಹೊರಗಿನ ಊರುಗಳಿಂದ ಭಕ್ತಾಧಿಗಳ ಆಗಮಿಸದಂತೆ ನಿಯಂತ್ರಿಸಿ, ಸಮಿತಿಯವರು ಮಾತ್ರ ಸಾಂಕೇತಿಕವಾಗಿ ಆಚರಿಸಲು, ನಿಯಂತ್ರಣದಲ್ಲಿದ್ದರೆ ಅಂಗಡಿ, ಮುಂಗಟ್ಟು, ಸ್ಟಾಲ್ ಮತ್ತು ಎಕ್ಸಿಬಿಷನ್‍ಗಳಿಗೆ ಅವಕಾಶವಿಲ್ಲದಂತೆ ಹಾಗೂ ಕಡಿಮೆಯಾಗಿದ್ದರೆ ಸಹಜವಾಗಿ ಜಾತ್ರೆ ನಡೆಸಲು ಕ್ರಮ ಕೈಗೊಳ್ಳಲಾಗುವುದು.

ಜಿಲ್ಲೆಯಲ್ಲಿ ಸೋಂಕಿನ ದರ 11%ರಷ್ಟಿರುವುದನ್ನು ಗುರುತಿಸಲಾಗಿದೆ. ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ಈ ನಿರ್ಣಯಕ್ಕೆ ಸಮಿತಿಯು ಒಪ್ಪಿಗೆ ಸೂಚಿಸಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಇದನ್ನು ಒದಿ : https://cnewstv.in/?p=7698

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*