Cnewstv.in / 20.01.2022 / ರಾಮನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಪಾದಯಾತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲ : ರಾಮನಗರ ಎಸ್.ಪಿ ವರ್ಗಾವಣೆ.
ರಾಮನಗರ : ಸರ್ಕಾರ ಹಾಗೂ ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟದಲ್ಲಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.
ರಾಮನಗರದ ಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರ್. ಗಿರೀಶ್ ರವರನ್ನು ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ ನೇಮಕ ಮಾಡಲಾಗಿದ್ದು, ತಕ್ಷಣವೇ ಕರ್ತವ್ಯ ಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ನೂತನ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂಟೆಲಿಜೆನ್ಸಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಸರ್ಕಾರ ನೇಮಕ ಮಾಡಿದೆ.
ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಗಿರೀಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಇದನ್ನು ಒದಿ : https://cnewstv.in/?p=7770
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv