Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಸದ್ದು ಮಾಡುತ್ತಿರುವ ಹಿಜಾಬ್ – ಕೇಸರಿ ಶಾಲು
ಶಿವಮೊಗ್ಗ : ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಇದೀಗ ಮಲೆನಾಡಿಗೂ ಕಾಲಿಟ್ಟಿದೆ. ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು. ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ವಿದ್ಯಾರ್ಥಿಗಳ ಆಗ್ರಹಿಸಿದರು.
ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಬೇಕು ಒಂದು ವೇಳೆ ಅವರು ತರಗತಿಗಳಿಗೆ ಪ್ರವೇಶಿಸಿದರೆ ನಾವು ಕೂಡ ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು ಹಾಗೂ ಕಾಲೇಜು ಸಿಬ್ಬಂದಿಗಳು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ.
ವಿಡಿಯೋ..
ಇದನ್ನು ಒದಿ : https://cnewstv.in/?p=8255
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv