Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ – ಕೇಸರಿ ಶಾಲು ವಿವಾದ : ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ.
ಶಿವಮೊಗ್ಗ : ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದ್ದು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಇದು ಬೆಳಗ್ಗೆ ಬಾಪೂಜಿನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಕಲ್ಲುತೂರಾಟ ನಡೆದಿದ್ದು, ವಿಚಾರ ತಾರಕಕ್ಕೇರಿದ್ದು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾಲೇಜು ಆವರಣದಲ್ಲಿ ಆರಂಭವಾದ ಸಂಘರ್ಷ ನಗರದ ಹಲವು ರಸ್ತೆಗಳಿಗೆ ಹಬ್ಬಿತ್ತು.
ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಲಘು ಲಾಠಿ ಚಾರ್ಜ್ ಮಾಡಿ ತಾರಕಕ್ಕೇರಿದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತೋಟಿಗೆ ತಂದರು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು ನಗರದಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಹಾಗೂ ನಗರದಾದ್ಯಂತ 144 ಜಾರಿಗೊಳಿಸಲಾಗಿದೆ.
ಇದನ್ನು ಒದಿ : https://cnewstv.in/?p=8289
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv