Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ : ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಬೇಕು ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಶಿವಮೊಗ್ಗ ಜಿಲ್ಲಾ NSUI ಆಗ್ರಹಿಸಿದೆ.
ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಸಂದರ್ಭದಲ್ಲಿ ರಾಜ್ಯದ ರಾಣೆಬೆನ್ನೂರು ತಾಲ್ಲೂಕಿನ ಚಳ್ಳಕೆರೆ ಗ್ರಾಮದ ಯುವಕ ನವೀನ್ ಮೃತಪಟ್ಟಿದ್ದು ರಾಜ್ಯ ಸರ್ಕಾರ ಕೂಡಲೇ ಮೃತನ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಬೇಕು. ಯುದ್ಧಪೀಡಿತ ಪ್ರದೇಶದಲ್ಲಿ ಇನ್ನೂ ಸಿಲುಕಿರುವ ಯಾರ ಜೀವಕ್ಕೂ ಹಾನಿಯಾಗದಿರಲು ಕ್ರಮವಹಿಸಬೇಕು ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕು ಎಂದು ಶಿವಮೊಗ್ಗ ಜಿಲ್ಲಾ ಎನ್ ಎಸ್ ಯುಐ ಆಗ್ರಹ.
ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಕರೆತರಲು ಕೆಲಸ ನಡೆಯುತ್ತಿದ್ದರೂ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ .
ಉಕ್ರೇನ್ ನಲ್ಲಿ ಇರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರ BJP ಸರ್ಕಾರ ತುರ್ತಾಗಿ ಮಾಡಬೇಕು ಎಲ್ಲ ಭಾರತೀಯರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯುಕ್ರೇನ್ ನಿಂದ ಭಾರತ ದೇಶಕ್ಕೆ ಕರೆತರುವಲ್ಲಿ ಬಹುತೇಕ ಎಲ್ಲರೂ ವಿದ್ಯಾರ್ಥಿಗಳೇ ಆಗಿದ್ದು ಅವರು ವಿದ್ಯಾಭ್ಯಾಸ ಪೂರ್ಣ ಗೊಳಿಸಲು ಸಮಸ್ಯೆ ಎದುರಾಗಬಹುದಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಎಲ್ಲ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಲು ಸಂಬಂಧಿಸಿದ ಕ್ರಮವನ್ನು ಕೈಗೊಳ್ಳಬೇಕು .ಈ ಸಂಬಂಧ ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಅಗತ್ಯ ಸೂಚನೆ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ NSUU ಒತ್ತಾಯಿಸುತ್ತದೆ.
ಉಕ್ರೇನ್ ನಲ್ಲಿ ವೈದ್ಯ ಶಿಕ್ಷಣ ಪಡೆಯಲು 15 ರಿಂದ 20 ಲಕ್ಷ ರೂ ಖರ್ಚಾಗುತ್ತದೆ .ಆದರೆ ಭಾರತ ದೇಶದಲ್ಲಿ ಮೆಡಿಕಲ್ ಸೀಟು ಪಡೆಯಲು ಕೋಟಿ ರೂಗೂ ಅಧಿಕ ವ್ಯಯಿಸಬೇಕಾದ ಪರಿಸ್ಥಿತಿ ಇದೆ .ಡೊನೇಷನ್ ಮಾಫಿಯಾ ದೇಶದಲ್ಲಿ ಹೆಚ್ಚಲು ಕೇಂದ್ರ ಸರ್ಕಾರವೇ ನೇರ ಕಾರಣ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಡೊನೇಷನ್ ಮಾಫಿಯಾ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ .ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಅವಧಿ ಪೂರ್ಣವಾಗದಿದ್ದರೆ ಕೆಲ ವರ್ಷಗಳಿಂದ ಕಷ್ಟಪಟ್ಟು ಪಡೆದ ಶಿಕ್ಷಣ ವ್ಯಕ್ತವಾಗುತ್ತದೆ .
ಶಿಕ್ಷಣ ಪೂರ್ಣಗೊಳಿಸಲು ಎದುರಾಗುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಶಿವಮೊಗ್ಗ ಜಿಲ್ಲಾ NSUI ಒತ್ತಾಯಿಸುತ್ತದೆ ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ವಿಜಯ್ ,ರವಿ ,ರಾಜ್ಯ ಕಾರ್ಯದರ್ಶಿ ನಿತಿನ್ ,ಚರಣ್ ,ಹರ್ಷಿತ್ ಗೌಡ ,ಚಂದ್ರೋಜಿ ರಾವ್ ,ರವಿ, ಸಂಜು, ಕಿರಣ್,ಮನೋಜ್, ಸುಮನ್ , ಸುಹಾಸ್ ,ನಾಗೇಂದ್ರ ಆಟೊಕ್, ಅಜರ್ , ಶಾಬಾಜ್ ,ಅಯಾಜ್ , ವಿಶ್ವ ,ಉಪೇಂದ್ರ ಹಾಗೂ ಪ್ರತಿಭಟನೆಯಲ್ಲಿ ಸಾಕಷ್ಟು ಯುವಕರು ಪಾಲ್ಗೊಂಡಿದ್ದರು
ಇದನ್ನು ಒದಿ : https://cnewstv.in/?p=8853
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv