Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಂಕಿಗಾಹುತಿಯಾದ ಮೆಕ್ಕೆಜೋಳದ ರಾಶಿ, ಲಕ್ಷಾಂತರ ರೂಪಾಯಿ ನಷ್ಟ.
ಶಿವಮೊಗ್ಗ : ಮೆಕ್ಕೆಜೋಳದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಸೋಮಿನಕೊಪ್ಪದ ಕುಮಾರಪ್ಪ, ನರಸಿಂಹಪ್ಪ, ಸರಸ್ವತಿಯವರಿಗೆ ಸೇರಿದ ಮೆಕ್ಕೆಜೋಳ ರಾಶಿಯು ಬೆಂಕಿಗಾಹುತಿಯಾಗಿದೆ. ಸುಮಾರು 200 ರಿಂದ 225 ಕ್ವಿಂಟಾಲ್ ನಷ್ಟಿದ್ದ ಮೆಕ್ಕೆಜೋಳದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ ಆದರೂ ಸಹ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ. ವಿಷಯ ತಿಳಿದ ಕೂಡಲೆ ತಕ್ಷಣ ಸೋಮಿನಕೊಪ್ಪ ಗ್ರಾಮಕ್ಕೆ ಬೇಟಿ ನೀಡಿದ ಮಾಜಿ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ್ ರವರು ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ಇದನ್ನು ಒದಿ : https://cnewstv.in/?p=8864
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv