Breaking News

ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಯೋಗಿ ಆದಿತ್ಯನಾಥ್ ಮುನ್ನಡೆ,

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನವದೆಹಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ಗೋರಖ್ ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಯೋಗಿ ಆದಿತ್ಯನಾಥ್ ಅವರು 10,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 268 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ.

ಉತ್ತರಾಖಂಡ್ ನಲ್ಲಿ ನಲ್ಲಿಯೂ ಬಿಜೆಪಿ ಪಕ್ಷ 70 ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಎಂ ಉತ್ತಮ್ ಸಿಂಗ್ ಧಾಮಿ, ಖತೀಮಾ 2000 ಮತಗಳಿಂದ ಹಿನ್ನಡೆ ಎದುರಿಸುತ್ತಿದ್ದಾರೆ. ಇನ್ನು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=8926

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*