ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ.

Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ.

ಶಿವಮೊಗ್ಗ : ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್, ಮೈಸೂರು ಇವರ ಸಹಯೋಗದಲ್ಲಿ ಮಾ.09 ರಂದು “ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ” ಅಂಗವಾಗಿ ಮಹಿಳೆಯರ ಕುರಿತು ಉಪನ್ಯಾಸ, ಮನರಂಜನಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನೆರವೇರಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸರಸ್ವತಿ ಕೆ.ಎನ್. ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ, ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎಂಬ ಥೀಮ್‍ನೋಂದಿಗೆ ಮಹಿಳೆಯರಿಗಿರುವ ಹಕ್ಕುಗಳು ಮತ್ತು ಗೌರವದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಬೇಕೆಂದು ಹೇಳಿದರು.

ಲೇಖಕರು ಹಾಗೂ ಸಮಾಜ ಸೇವಕರೂ ಆದ ಶ್ರೀರಂಜಿನಿ ದತ್ತಾತ್ರಿಯವರು ಮಹಿಳೆಯರ ಕುರಿತು ಉಪನ್ಯಾಸ ನೀಡಿದರು. ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಮಹದೇವ ನಾಯ್ಕ ಪಿ, ದೇಶದ ಏಳಿಗೆಗಾಗಿ ಮಹಿಳಾ ಪ್ರಗತಿಪರ ಮನಸ್ಸುಗಳು ಹೆಚ್ಚಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧೀಕ್ಷಕರಾದ ಶಿವಾನಂದ ಆರ್ ಶಿವಪೂರ ರವರು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಬಂಧಿ ನಿವಾಸಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು. ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್, ಮೈಸೂರು ಬಹುಮಾನ ಪ್ರಾಯೋಜಕತ್ವವನ್ನು ವಹಿಸಿದ್ದರು. ಸಂಸ್ಥೆಯ ಜೈಲರ್‍ರವರಾದ ಸವಿತಾ ಬೆಳ್ಳುಂಡಗಿ, ಆಪ್ತ ಸಮಲೋಚಕಿ ಪಾರ್ವತಿ, ಎಸ್‍ಬಿಐಎಂಪಿಪಿಎಂ ಪ್ರವೀಣ್ ಕುಮಾರ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕರಾದ ಅಂಬಿಕಾ ರವರು ನಿರೂಪಣೆ ಮಾಡಿದರು.

ಇದನ್ನು ಒದಿ : https://cnewstv.in/?p=8946

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments