Breaking News

ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.

Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ ವರ್ಗಾವಣಾ ಪತ್ರ(ಟಿ.ಸಿ), ಆಧಾರಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಸಲ್ಲಿಸಬೇಕಾಗುತ್ತದೆ.

ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು, ಲಘು ವಾಹನ ಚಾಲನ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು. ಜನನ ಪ್ರಮಾಣಪತ್ರ, ಆಧಾರ್‍ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ನೀಡಬೇಕಾಗುತ್ತದೆ.

ಆಸಕ್ತ ಅಭ್ಯರ್ಥಿಗಳು www.karnataka.gov.in/kmvstdcl ವೆಬ್ ಸೈಟ್ ಮೂಲಕ ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸುವಂತೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಚಾಲನಾ ತರಬೇತಿಯನ್ನು ಬೆ.ಮ.ಸಾ.ಸಂಸ್ಥೆ ಕೇಂದ್ರ ವಡ್ಡರಹಳ್ಳಿ, ದಾಸನಪುರ ಹೋಬಳಿ ಬೆಂಗಳೂರು ಉತ್ತರದಲ್ಲಿ ನೀಡಲಾಗುವುದು. ಅರ್ಹ ಅಭ್ಯರ್ಥಿಗಳಿಗೆ 30 ದಿನಗಳ ತರಬೇತಿಯಲ್ಲಿ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-276776 ನ್ನು ಸಂಪರ್ಕಿಸುವುದು.

ಇದನ್ನು ಒದಿ : https://cnewstv.in/?p=9303

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments