ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ..? – ಮಾಜಿ ಸಿ.ಎಂ. ಸಿದ್ದರಾಮಯ್ಯ.
Cnewstv.in / 24.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ..? – ಮಾಜಿ ಸಿ.ಎಂ. ಸಿದ್ದರಾಮಯ್ಯ.
ಶಿವಮೊಗ್ಗ : ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ ಎಂದು ಮಾಜಿ ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು.? ಹರ್ಷನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಸರ್ಕಾರ ಪರಿಹಾರ ಕೊಟ್ಟಿದೆ. ಅದೇ ಬೆಳ್ತಂಗಡಿಯ ದಿನೇಶ್ ಕೊಲೆಯಾದಾಗ ಕುಟುಂಬಕ್ಕೆ ಎಷ್ಟು ಕೊಟ್ಟರು ?? ನರಗುಂದದಲ್ಲಿ ಮುಸ್ಲಿಂ ಕೊಲೆಯಾಯ್ತು.. ಅವರಿಗೆ ಎಷ್ಟು ಪರಿಹಾರ ಕೊಟ್ಟರು ಎಂದು ಪ್ರಶ್ನೆ ಮಾಡಿದರು.