Breaking News

ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..

Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಜನಧ್ವನಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ಮತದಾರರ ಸರ್ವೆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಕ್ಕೆ ಏಳು ಸ್ಥಾನ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದರು.

ಕಮಲಾ ಬೆಳೆಯೋದು ಕೆಸರಲ್ಲಿ. ಹಾಗೆಯೇ ಬಿಜೆಪಿಯವರು ಮೊದಲು ನೆಲವನ್ನೆಲ್ಲಾ ಕೆಸರು ಮಾಡುತ್ತಾರೆ. ಆ ಗಲೀಜಿನಿಂದ ಬೆಳೆಯಲು ಪ್ರಯತ್ನ ಪಡುತ್ತಾರೆ. ಅದೇ ರೀತಿ ರಾಜ್ಯದಲ್ಲಿ ಅಶಾಂತಿಯನ್ನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಸರ್ಕಾರಿ ಹುದ್ದೆಗಳಿಗೆ ಒಂದೊಂದು ರೇಟ್. ವಿವಿಧ ಇಲಾಖೆಗಳಲ್ಲಿ ನೇಮಕಾತಿಯಲ್ಲಿ ಅಕ್ರಮ ನಡೆಯುತ್ತಿದೆ. ನಾನು ಇಂಧನ ಸಚಿವನಾಗಿದ್ದಾಗ 30 ಸಾವಿರ ಜನರಿಗೆ ಉದ್ಯೋಗ ನೀಡಿದ್ದೇನೆ. ನಾನು ಅವರಲ್ಲಿ ಒಬ್ಬರಿಂದ ಆದರೂ ಅಕ್ರಮವಾಗಿ ನೇಮಕ ಮಾಡಿದ್ದರು ಕೂಡಲೇ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

ಇದನ್ನು ಒದಿ‌ : https://cnewstv.in/?p=9772

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*