ಶಿವಮೊಗ್ಗ, ಸೆ.27: ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಮಾಜು ಮಾಡಲು ಮಸೀದಿಯೆ ಬೇಕೆ? ಸುಪ್ರೀಂ ತೀರ್ಪು ನಿರೀಕ್ಷಿಸಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ದಶಕಗಳ ಹೋರಾಟ, ಈ ಕುರಿತಂತೆ ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗುವಂತೆ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು.
C News TV Kannada News Online in cnewstv