Breaking News

ಜಿ.ಪಂ, ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡುವು..

Cnewstv.in / 25.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿ.ಪಂ, ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡುವು..

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸುಪ್ರೀಂ ಕೋರ್ಟ್‌ ಎಂಟು ವಾರಗಳ ಗಡುವು ನೀಡಿದ ಬೆನ್ನಲ್ಲೇ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್‌ 12 ವಾರಗಳ ಗಡುವು ವಿಧಿಸಿದೆ. ಈ ಗಡುವು ಮೀರಿ ಹೆಚ್ಚಿನ ಕಾಲಾವಕಾಶ ಕೇಳದಂತೆಯೂ ರಾಜ್ಯ ಸರಕಾರಕ್ಕೆ ತಾಕೀತು ಮಾಡಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರಕಾರದ ಪರ ವಾದಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, “ಮೀಸಲಾತಿ ನಿಗದಿಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ’ ಎಂದರು. ಪ್ರತಿಕ್ರಿಯಿಸಿದ ಆಯೋಗದ ಪರ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ, ರಾಜ್ಯ ಸರಕಾರ ಮತ್ತೆ ಮತ್ತೆ ಹೆಚ್ಚಿನ ಸಮಯ ಕೇಳಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೂರು ತಿಂಗಳ ಗಡುವು ವಿಧಿಸಿ ವಿಚಾರಣೆ ಮುಂದೂಡಿತು.

ಚುನಾವಣೆಗೆ ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾ ವಣ ಆಯೋಗದಿಂದ ಹಿಂಪಡೆದಿದ್ದ ಸರಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದನ್ನು ಒದಿ : https://cnewstv.in/?p=9928

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*