Breaking News

Tag Archives: Shivamogga

ನೆರೆ ಸಂತ್ರಸ್ಥರ ಪರಿಹಾರದಲ್ಲೂ ತಾರತಮ್ಯ – ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ರಾಜ್ಯ ಸರ್ಕಾರ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ  ಹೆಚ್.ಎಸ್.ಸುಂದರೇಶ್ ದೂರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಡಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಪರಿಸ್ಥಿತಿ ಉಂಟಾಗಿ ಕೆಲ ತಿಂಗಳು ಕಳೆದಿವೆ. ನೆರೆಯಿಂದಾಗಿ ಹಲವು ಕುಟುಂಬಗಳು ಮನೆ, ಮಠ ಕಳೆದುಕೊಂಡು ಬೀದಿ ಪಾಲಾಗಿದ್ದರು. ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ, ಈವರೆಗೂ ಸಂತ್ರಸ್ತರಿಗೆ ಸವಲತ್ತು ಕೊಟ್ಟಿಲ್ಲ. ಕೆಲವರಿಗೆ 10, 25, 35 ಸಾವಿರ ಕೊಟ್ಟಿದ್ದಾರೆ. ಸ್ವಪಕ್ಷೀಯರಿಗೆ 35 ಸಾವಿರ ಕೊಟ್ಟಿದ್ದು, ಅವರ ಪಕ್ಷದ ಕಾರ್ಯಕರ್ತರ ಮನೆ ...

Read More »

ಅಯೋದ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್.

ಶಿವಮೊಗ್ಗ: ಅಯೋಧ್ಯೆ ಅಂತಿಮ ತೀರ್ಪು ಇಂದು ಹೊರಬರಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವುದರಿಂದಾಗಿ ಪೊಲೀಸರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಾಳೆ ಈದ್ ಮಿಲಾದ್ ಹಬ್ಬದ‌ಆಚರಣೆಗಾಗಿ ಮುಸ್ಲಿಂ ಸಮುದಾಯದವರು ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ವೇದಿಕೆ ಸೇರಿದಂತೆ ಟಿಪ್ಪು ಹಾಗೂ ಹಸಿರು ಬಾವುಟಗಳನ್ನು ಕಟ್ಟಿದ್ದರು. ಅಷ್ಟರಲ್ಲಾಗಲೇ ಸುಪ್ರೀಂ ಕೋರ್ಟ್ ಇಂದೇ ತೀರ್ಪು ನೀಡುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಅಮೀರ್ ಅಹಮದ್ ವೃತ್ತದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Read More »

ಪೊಲಿಸ್ ಇಲಾಖೆಯ ನೌಕರರಿಗೆ ಔರಾದ್ಕರ್ ವರದಿಯ ಮೂಲ ಉದ್ದೇಶವನ್ನೆ ಜಾರಿಗೊಳಿಸಿ –  ಹೆಚ್.ಪಿ.ಗಿರೀಶ್

  ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಬಹುದಿನದ ಬೇಡಿಕೆಯಾಗಿದ್ದ ಔರದ್ಕರ್ ವರದಿಯನ್ನು ದೀಪಾವಳಿಯಿಂದ ಜಾರಿಗೊಳಿಸಲಾಗುವುದು ಎಂದು ಇತ್ತೀಚೆಗೆ ಸಿಎಂ ಬಿ.ಎಸ್.ವೈ ಹೇಳಿದ ಬೆನ್ನಲ್ಲೇ ಈ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆಗಳು ಆರಂಭವಾಗಿದ್ದವು. ಆದರೆ ಈಗ ಪೊಲೀಸ್ ಸಿಬ್ಬಂದಿಗಳೇ ಸಿಎಂಗೆ ಪತ್ರ ಬರೆದು ಔರಾದ್ಕರ್ ವರದಿಯನ್ನ ರದ್ದುಗೊಳಿಸಿ ಎಂದು ಒತ್ತಾಯಿಸಿದ್ದಾರೆ. ವೇತನ ತಾರತಮ್ಯ ನಿವಾರಣೆಗಾಗಿ ಔರಾದ್ಕರ್ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಆದರೆ ವರದಿ ಸಿದ್ಧಪಡಿಸುವಾಗ ಆರ್ಥಿಕ ಇಲಾಖೆ ತನ್ನ ಚಾಣಾಕ್ಷ್ಯತನವನ್ನು ತೋರಿಸಿದೆ ಎಂದು ಆರೋಪಿಸಲಾಗಿದು. ಡಿಜಿ ಹಾಗೂ ಐಜಿ ಹೊರಡಿಸಿದ್ದ ಫಿಟ್ಮೆಂಟ್ ಅಂತ ಮೂಲ ವೇತನ ನಿಗದಿಯಾಗಬೇಕಿತ್ತು. ಆದರೆ ಅದನ್ನು ರದ್ದುಪಡಿಸಿ ಕೇವಲ ಹೊಸದಾಗಿ ಸೇರ್ಪಡೆಯಾದ ಸಿಬ್ಬಂದಿಗೆ ಮಾತ್ರ ವೇತನ ನಿಗದಿ ಮಾಡಲಾಗಿದೆ. ಇದರಿಂದ ಔರಾದ್ಕರ್ ವರದಿ ಮೂಲ ಉದ್ದೇಶವನ್ನೇ ಮರೆಮಾಚಲಾಗಿದೆ ಎಂದು  ಹೇಳಲಾಗುತ್ತಿದೆ.. ಈಗಿನ ವರದಿಯು  ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಗೃಹ ಸಚಿವರು ತೀರ್ಮಾನಿಸಿ ಜಾರಿಗೊಳಿಸಿದಂತಿಲ್ಲ.  ಈ ವರದಿಯ ಜಾರಿಯಿಂದ ಪೊಲೀಸರ ಜೀವನ ಮಟ್ಟ ಸುಧಾರಿಸುತ್ತೆ ಎಂದು ನಂಬಲಾಗಿತ್ತು. ಆದರೆ ಆರ್ಥಿಕ ಇಲಾಖೆಯು ಪೊಲೀಸ್ ಇಲಾಖೆಯ ಬಹುದಿನದ ಬೇಡಿಕೆಗೆ ತಣ್ಣೀರೆರಚಿದೆ. ವರದಿಯ ಮೂಲ ಉದ್ದೇಶವನ್ನು ಬಿಟ್ಟು ಆರ್ಥಿಕ ಇಲಾಖೆಯು ಹೊಸದಾಗಿ ವರದಿಯನ್ನು ಮಾರ್ಪಾಡು ಮಾಡಿರುವ ವರದಿ ಜಾರಿಯಾದ್ರೆ ವೇತನ ತಾರತಮ್ಯದಿಂದ ಪೊಲೀಸರು ವೈಯಕ್ತಿಕವಾಗಿ ಖಿನ್ನತೆಗೆ ಒಳಗಾಗೋ ಸಾಧ್ಯತೆ ಇದೆ..ಈ ವರದಿಯಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಶೇ95ರಷ್ಟು ಸಿಬ್ಬಂದಿಗೆ ಒಂದು ರೂಪಾಯಿ ಪ್ರಯೋಜನವಿಲ್ಲ. ಆದ್ದರಿಂದ ಸರ್ಕಾರ ರಾಘವೇಂದ್ರ ಔರಾದ್ಕರ್ ವರದಿಯ ಮೂಲ ಉದ್ದೇಶದ ಬೇಡಿಕೆಯನ್ನು ...

Read More »

ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ ಪಿ

  ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಶಾಂತರಾಜು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಶಿವಮೊಗ್ಗ ಉಪವಿಭಾಗದ 200 ಕ್ಕೂ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಪ್ರತಿಯೊಬ್ಬ ಅಪರಾಧ ಮಾಹಿತಿಯನ್ನು ಸಂಗ್ರಹಿಸಿದರು. ಜೊತೆಗೆ ಮುಂದೆ ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿದರೆ‌ ಸುಮ್ಮನಿರುವುದಿಲ್ಲ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Read More »

ತೀರ್ಥಹಳ್ಳಿ ದಸರಾ ಮೆವಣಿಗೆಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಬರುತ್ತಿದ್ದ ವೃದ್ದರೊಬ್ಬರು ಕುಸಿದು ಬಿದ್ದು ಸ್ಥಳದಲ್ಲೇ‌ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಸಂಜೀವ್ ಶೆಟ್ಟಿ(62) ಮೃತಪಟ್ಟವರು. ದಸರಾ ಮೆರವಣಿಗೆಯಲ್ಲಿ‌ ಭಾಗಿಯಾಗಿದ್ದ ಇವರು ಎಲ್ಲರಂತೆ ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದರು. ಆದರೆ‌ ಇದೇ ವೇಳೆ ಅಸ್ವಸ್ಥಗೊಂಡು ಸಂಜೀವ ಶೆಟ್ಟಿ ಕುಸಿದು ಬಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ನೀರು ಕುಡಿಸಿ ಉಪಚರಿಸಲು ಯತ್ನಿಸಿದರಾದರೂ ಅಷ್ಟರಲ್ಲಾಗಲೇ ಸಂಜೀವ ಶೆಟ್ಟಿ ಮೃತಪಟ್ಟಿದ್ದಾರೆ.

Read More »

ಪ್ಲಾಸ್ಟಿಕ್ ಮುಕ್ತ ಆಂದೋಲನದ ಮೂಲಕ ಗಾಂಧಿ ಜಯಂತಿ ಆಚರಣೆ..

ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ ಹಾಗೂ ಪಿ.ವಿ.ಸಿಂಧು ಶಟಲ್‌ ಬಳಗ ಹಾಗೂ ಗ್ರೋ ಗ್ರೀನ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯನ್ನು ಚಂದನ ಪಾರ್ಕ್ ನಲ್ಲಿ ಆಚರಿಸಲಾಯಿತು.. ಬಳಿಕ ಬಡಾವಣೆಯನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮಾದಾನ ಮಾಡಿದರು. ಇದಾದ ನಂತರದಲ್ಲಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ಗಳನ್ನು ವಿತರಣೆ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ನಗರ ಆಂದೋಲನಕ್ಕೆ ಬೆಂಬಲ ಸೂಚಿಸಿದರು..ಈ ಸಂದರ್ಭದಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಕಾಟನ್ ಬ್ಯಾಗ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿ.ಪ್ಲಾಸ್ಟಿಕ್ ಮುಕ್ತ ಆಂದೋಲನಕ್ಕೆ ಸಂಪೂರ್ಣ ಸಹಕರಿಸಿ ಬಡಾವಣೆಯ ನಿವಾಸಿಗಳಲ್ಲಿ ...

Read More »

ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ.

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಕಾರ್ಯಕ್ರಮದ ಒಂದು ಅಂಗವಾದ ಯುವ ದಸರಾ ಸಮಿತಿಯಿಂದ ಹೊನಲು ಬೆಳಕು ಕಬಡ್ಡಿ ಪಂದ್ಯಾವಳಿಯನ್ನು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಶಿವಮೊಗ್ಗ ವಲಯದ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಇ. ಕಾಂತೇಶ್ ರವರು ಉದ್ಘಾಟಿಸಿದರು…ಸುಮಾರು‌ 40 ಕ್ಕು ಹೆಚ್ಚು ಕಬಡ್ಡಿ ತಂಡಗಳು ಉಪಸ್ಥಿತರಿದ್ದರು.

Read More »

ಸಿಗಂದೂರು ಬಳಿ ಲಾಂಚ್ ನಿಂದ ಶರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ- Exclusive video

ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನಲ್ಲಿ‌ ಸಂಚರಿಸುವ ಲಾಂಚ್ ನಿಂದ ನೀರಿಗೆ ಹಾರಿ ಅಪರಿಚಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಂಚ್ ಅಂಬಾರಗೋಡ್ಲು ಕಡೆಯಿಂದ ಕಳಸವಳ್ಳಿಗೆ ಹೋಗುವಾಗ ಹಿನ್ನೀರಿನ ಮಧ್ಯೆ ಅಪರಿಚಿತ ವ್ಯಕ್ತಿ ಏಕಾಏಕಿ ನೀರಿಗೆ ಧುಮುಕಿದ್ದಾನೆ. ಲಾಂಚ್ ನ ಸಿಬ್ಬಂದಿ ಆತನನ್ನು ರಕ್ಷಿಸಲು ಪ್ರಯತ್ನಸಿದರಾದರೂ ಅಷ್ಟರಲ್ಲಾಗಲೇ ಆತ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದಾನೆ. ಮೃತನ ಶವಕ್ಕಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌..  

Read More »

ಅಕ್ಟೋಬರ್ 1 ರಿಂದ DL, RC ಪತ್ರದಲ್ಲಿ ಬದಲಾವಣೆ – ಕೇಂದ್ರ ಸರ್ಕಾರ.

  ಕೇಂದ್ರ ಸರ್ಕಾರವು ಹೊಸ ಮೋಟರ್ ವಾಹನ ಕಾಯ್ದೆ ಜಾರಿಗೆ ತಂದ ಬಳಿಕ ವಾಹನ ಚಾಲನೆ ಪರವಾನಗಿ ಪತ್ರ ಹಾಗೂ ದಾಖಲಾತಿಗಳಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇಡೀ ದೇಶಾದ್ಯಂತ ಒಂದೇ ಮಾದರಿಯ DL ಹಾಗೂ RC ಪತ್ರವನ್ನು ನೀಡಲು ಮುಂದಾಗಿದೆ. ಹಳೆ ಮುದ್ರಣ ಶೈಲಿಯೂ ಬದಲಾಗಲಿದೆ. DL ಹಾಗೂ RC ಯನ್ನು ಮೈಕ್ರೋಚಿಪ್ ಹಾಗೂ ಕ್ಯೂಆರ್ ಕೋಡ್ ಮೂಲಕ ಅಳವಡಿಸಲಾಗುವುದು. ಈಗಾಗಲೇ ರಾಜ್ಯದ ಎಲ್ಲಾ ಟ್ರಾಫಿಕ್ ಪೊಲೀಸ್ ಠಾಣೆಗಳಿಗೆ ಟ್ರಾಕಿಂಗ್ ಉಪಕರಣಗಳನ್ನು ಕಳುಹಿಸಲಾಗಿದೆ. ಈ ಟ್ರಾಕಿಂಗ್ ಉಪಕರಣದ ಮುಖಾಂತರ ಯಾವುದೇ ವಾಹನಗಳ ಮಾಹಿತಿಯನ್ನು ...

Read More »

ಬ್ಯಾಂಕ್ ನಲ್ಲಿ ಇಟ್ಟ ಹಣ ಬಿಡಿಸಿಕೊಳ್ಳಲು ಗ್ರಾಹಕರ ಪರದಾಟ

ಶಿವಮೊಗ್ಗ: ಬ್ಯಾಂಕ್ ನಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲ ಎಂದರೆ‌ ಬ್ಯಾಂಕ್ ನವರು ದಂಡ ಹಾಕುತ್ತಾರೆ. ಆದರೆ ಬ್ಯಾಂಕ್ ನಲ್ಲಿ ಡಿಪಾಸಿಟ್ ಇಟ್ಟಿರುವ ಹಣವನ್ನು ಬಿಡಿಸಿಕೊಳ್ಳಲು ಹೋದರೆ ಆ ಹಣವನ್ನು ಗ್ರಾಹಕರಿಗೆ ಕೊಡಲು ಸಾಧ್ಯವಿಲ್ಲ ಎನ್ನುವುದು ಎಷ್ಟರಮಟ್ಟಿಗೆ ಸರಿ. ಇಂಥದ್ದೊಂದು ಸಂದಿಗ್ಧ ಸ್ಥಿತಿಗೆ ಪಂಜಾಬ್ ಅಂಡ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ಬಂದು ತಲುಪಿಗೆ. ಹೌದು ಇಂದು ಬೆಳಗ್ಗೆ ಈ ಬ್ಯಾಂಕ್ ನ ಗ್ರಾಹಕರಿಗೆ ಅಚ್ಚರಿ ಕಾದಿತ್ತು. ಬ್ಯಾಂಕ್ ನಲ್ಲಿ ತಾವು ಇಟ್ಟಿರುವ ಹಣದಲ್ಲಿ ತಮಗೆಷ್ಟು ಬೇಕೋ ಅಷ್ಟನ್ನು ಬಿಡಿಸಿಕೊಳ್ಳಲು ಹೋದ ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ...

Read More »