ಶಿವಮೊಗ್ಗ : ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು. ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್ಸೈಟ್ ಮೂಲಕ ಅಥವಾ ಸಮೀಪದ ಸಿಎಸ್ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ...
Read More »Tag Archives: Covid 19
ಸರ್ಕಾರದಿಂದ ಹೋಂ ಐಸೋಲೇಷನ್ನ ಮಾರ್ಗಸೂಚಿ ಪ್ರಕಟ : ಇನ್ಮುಂದೆ ರೋಗಿಗಳಿಗೆ ಮನೆಯಲ್ಲಿಯೇ ಕೊರೊನಾ ಚಿಕಿತ್ಸೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾದವರಿಗೆ ಇನ್ಮುಂದೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸರ್ಕಾರ ಹೋಂ ಐಸೋಲೇಷನ್ ಮಾರ್ಗಸೂಚಿಯನ್ನ ಪ್ರಕಟಿಸಿದೆ.. ಸೋಂಕು ಗುಣಲಕ್ಷಣ ಇಲ್ಲದವರು, ಕಡಿಮೆ ಗುಣಲಕ್ಷಣ ಇದ್ದವರಿಗೆ ಹೋಂ ಐಸೊಲೇಷನ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹಾಗೂ ಯಾವುದೇ ಮಾರಕ ರೋಗ ಇಲ್ಲದವರಿಗೆ ಹೋಂ ಐಸೊಲೇಷನ್ ಮಾಡಲಾಗುತ್ತದೆ. ಹೋಂ ...
Read More »ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 22 ಕರೋನಾ ಪ್ರಕರಣಗಳು ಪತ್ತೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರು 22 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ವಿದೇಶ, ಅಂತರರಾಜ್ಯ ಹಾಗೂ ಕರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 13 ಜನರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ವಿದೇಶ ಹಾಗೂ ಅಂತರ್ ರಾಜ್ಯ ಹಾಗೂ ಬೆಂಗಳೂರಿನಿಂದ ಬಂದ 9 ಜನರಲ್ಲಿ ಇಂದು ಕರೋನಾ ವೈರಸ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 173 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇದುವರೆಗೆ 109 ಜನರು ಕರೋನಾ ಸೋಂಕಿನಿಂದ ಗುಣಮುಖರಾಗಿ ...
Read More »ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಕಂಟೈನ್ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲೆಯಲ್ಲಿ 10 ಕಂಟೈನ್ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ...
Read More »ಇಂದು ಶಿವಮೊಗ್ಗದಲ್ಲಿ ಹತ್ತು ಕರೋನಾ ಪ್ರಕರಣ ಪತ್ತೆ, ಸ್ವಾಮೀಜಿಗೂ ಬಿಡದೆ ಕಾಡಿದ ಕರೋನಾ.
ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮಠದ ಸ್ವಾಮೀಜಿ ಸೇರಿದಂತೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದಿದ್ದ ಎಂಟು ಜನರಲ್ಲಿ ಕಿಲ್ಲರ್ ಕರೋನಾ ವೈರಸ್ ಕಾಣಿಸಿಕೊಂಡಿದೆ. ಇದಲ್ಲದೆ ಇನ್ನೋರ್ವ ವ್ಯಕ್ತಿಯಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರು ತೀವ್ರ ಉಸಿರಾಟದ ತೊಂದರೆ(SARI) ಅನುಭವಿಸುತ್ತಿದ್ದಾರೆ. 25 ವರ್ಷದ ಮಹಿಳೆಯಲ್ಲಿಯೂ ಕರೋನಾ ಕಾಣಿಸಿಕೊಂಡಿದ್ದು, ಇವರಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂದು ಜಿಲ್ಲಾಡಳಿತ ಪತ್ತೆಹಚ್ಚಲಾರಂಭಿಸಿದೆ. ಸ್ವಾಮೀಜಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂಬುದು ಜಿಲ್ಲಾಡಳಿತಕ್ಕೆ ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ. ಇಂದು ಕರೋನಾ ಸೋಂಕಿಗೆ ತುತ್ತಾದ ...
Read More »ಜಿಲ್ಲೆಯಲ್ಲಿ 4 ಕರೋನಾ ಪ್ರಕರಣಗಳು ಪತ್ತೆ. ಮೂವರು ಸೋಂಕಿತರಿಗೆ ಟ್ರಾವೆಲ್ ಹಿಸ್ಟರಿನೆ ಇಲ್ಲ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಇಂದು 4 ಕರೋನಾ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ಒಬ್ಬ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಅತನಿಗೆ ಸೋಂಕು ದೃಢಪಟ್ಟಿದೆ. ಆದರೆ ಟ್ರಾವೆಲ್ ಹಿಸ್ಟರಿನೇ ಇಲ್ಲದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಇನ್ನೂ ಸೋಂಕಿತರ ಸಂಪರ್ಕದಲ್ಲಿ ಯಾರೆಲ್ಲ ಇದ್ದರೂ ಎಂಬುದನ್ನು ಜಿಲ್ಲಾಡಳಿತ ಪತ್ತೆಹಚ್ಚುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ 73 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು ಅದರಲ್ಲಿ 31 ಜನರು ಕರೋನಾದಿಂದ ಗುಣಮುಖರಾಗಿದ್ದಾರೆ ಪ್ರಸುತ್ತ ಜಿಲ್ಲೆಯಲ್ಲಿ 42 ಕರೋನಾ ಆಕ್ಟೀವ್ ಪ್ರಕರಣಗಳಿವೆ..
Read More »ಈ ಬಾರಿ ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ ? ಹಾಗೂ ಮಾರ್ಗಸೂಚಿ ಹೇಗಿದೆ ಗೊತ್ತಾ ??
ಶಿವಮೊಗ್ಗ : ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಇಲಾಖೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಯನ್ನು ಪಾಲಿಸಬೇಕು. ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತಂಡ ಇರುವುದು. ಪ್ರತಿಯೊಬ್ಬರ ಥರ್ಮಲ್ ಸ್ಕ್ಯಾನ್ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಯ ದೇಹದ ತಾಪಮಾನ ಹೆಚ್ಚಿರುವುದು ಕಂಡು ಬಂದರೆ, ಅದನ್ನು ಬಹಿರಂಗಪಡಿಸದೇ, ಗೊಂದಲಕ್ಕೆ ಅವಕಾಶ ನೀಡದೆ, ಅಂತಹ ವಿದ್ಯಾರ್ಥಿಗಳಿಗೆ ಮೀಸಲಾಗಿರಿಸಿರುವ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು.. ಜೂನ್ 25ರಿಂದ ಜುಲೈ 3ರವರೆಗೆ ನಡೆಯಲಿರುವ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ 24243 ವಿದ್ಯಾರ್ಥಿಗಳು ಬರೆಯಲಿದ್ದು, ಇವರಲ್ಲಿ 12287 ಬಾಲಕರು ಹಾಗೂ ...
Read More »ಶಿವಮೊಗ್ಗದಲ್ಲಿ ಇಂದು 2 ಪಾಸಿಟಿವ್ ಪ್ರಕರಣಗಳು ಪತ್ತೆ
ಶಿವಮೊಗ್ಗ : ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತಲಿದ್ದು ಇಂದು ಸಂಜೆ ಸಹ ಎರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 53 ಕ್ಕೆ ತಲುಪಿದೆ. ಮಹರಾಷ್ಟ್ರದಿಂದ ಶಿವಮೊಗ್ಗ ಕ್ಕೆ ಬಂದ ಇಬ್ಬರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮೇ26 ರಂದು ಇವರು ಮಹಾರಾಷ್ಟ್ರ ರಾಜ್ಯದಿಂದ ಶಿವಮೊಗ್ಗಗೆ ಬಂದಿದ್ದರು. ಶಿವಮೊಗ್ಗದ ಗ್ರಾಮಾತರ ಕ್ಷೇತ್ರದ ನಿವಾಸಿಗಳಾಗಿದ್ದ ಇವರನ್ನು ಬೈಪಾಸ್ ಬಳಿಯ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತು. ಇವರಲ್ಲಿ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಕೊರೋನ ಹಾಸ್ಪಿಟಲ್ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗ ...
Read More »ಆಯನೂರು ವೈದ್ಯೆಯಲ್ಲಿ ಕಾಣಿಸಿಕೊಂಡ ಕರೋನಾ ಸೋಂಕು : ಸಮುದಾಯ ಆರೋಗ್ಯ ಕೇಂದ್ರ ಸ್ಯಾನಿಟೈಸ್
ಶಿವಮೊಗ್ಗ : ಸೋಂಕಿತ ವ್ಯಕ್ತಿಯೊಬ್ಬನಿಗೆ ಚಿಕಿತ್ಸೆ ನೀಡಿದ್ದ ವೈದ್ಯೆ ಒಬ್ಬರಿಗೆ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ವೈದ್ಯೆಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆಯೊಬ್ಬರು ಓರ್ವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದರು. ಆದರೆ ಆತನಿಗೆ ಕರೋನಾ ತಪಾಸಣೆ ಮಾಡಿದಾಗ ಕರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಕೂಡಲೇ ಆತನಿಗೆ ಚಿಕಿತ್ಸೆ ನೀಡಿದ್ದ ವೈದ್ಯೆ ಸೇರಿದಂತೆ ಆರು ಜನರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಇದೀಗ ವೈದ್ಯೆಯಲ್ಲೂ ಕರೋನಾ ಸೋಂಕು ಕಂಡುಬಂದಿದೆ. ಆದರೆ ಹೋಂ ಕ್ವಾರಂಟೈನ್ ನಲ್ಲಿದ್ದ ಇನ್ನು ಐದು ಜನರಲ್ಲಿ ಕರೋನಾ ...
Read More »ಜಯನಗರ ಪೊಲೀಸ್ ಠಾಣೆ ಸೀಲ್ ಡೌನ್
ಶಿವಮೊಗ್ಗ: ಕರೋನಾ ಆತಂಕದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಇಡೀ ಪೊಲೀಸ್ ಠಾಣೆಗೂ ಸ್ಯಾನಿಟೈಸೇಷನ್ ಮಾಡಲಾಗಿದೆ. ಕೆಎಸ್ ಆರ್ ಪಿ ಎಎಸ್ ಐ ಸೇರಿದಂತೆ ಆರು ಜನ ಕೆಎಸ್ ಆರ್ ಪಿ ಪೊಲೀಸರಿಗೆ ಕರೋನಾ ಕಾಣಿಸಿಕೊಂಡಿತ್ತು. ಕೆಎಸ್ ಆರ್ ಪಿ ಎಎಸ್ ಐ ಮಗಳು ಜಯನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರೋನಾ ಸೋಂಕಿತ ಎಎಸ್ ಐ ಪ್ರಾಥಮಿಕ ಸಂಪರ್ಕದಲ್ಲಿ ಅವರ ಮಗಳೂ ಇದ್ದ ಹಿನ್ನೆಲೆಯಲ್ಲಿ ಜಯನಗರ ಪೊಲೀಸ್ ಠಾಣೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಇದರಿಂದಾಗಿ ...
Read More »
C News TV Kannada News Online in cnewstv