Breaking News

Tag Archives: Sagara

ದಾಖಲೆ ಇಲ್ಲದ 2 ಕೋಟಿ ವಶ.

ಸಾಗರ ತಾಲೂಕಿನ ಅಮಟಿಕೊಪ್ಪದ ಚೆಕ್ ಪೋಸ್ಟ್ ಹತ್ತಿರ 2 ಕೋಟಿ ಹಣವನ್ನು ಎರ್ಟಿಗಾ ಕಾರ್ ನಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ತೆಗೆದುಕೊಂಡು ಹೋಗುತ್ತಿದ್ದರು.ಅನುಮಾನಗೊಂಡು ಪ್ಲೇಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸರಿಯಾದ ದಾಖಲೆ ಇಲ್ಲದ ಕಾರಣ ಅಧಿಕಾರಿಗಳು ಐಟಿಯವರ ವಶಕ್ಕೆ ಹಣವನ್ನು ಒಪ್ಪಿಸಿದ್ದಾರೆ…

Read More »

ಭೀಕರ ರಸ್ತೆ ಅಪಘಾತ -ಓರ್ವ ಸಾವು, ಮೂವರಿಗೆ ಗಂಭೀರ ಗಾಯ.

ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಬಾಲ ಸಾಹೇಬ್ ಕೃಷ್ಣ ದೇಸಾಯಿ(48) ಎಂಬುವವರು ಮೃತಪಟ್ಟಿದ್ದಾರೆ. ಹಾಗು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಇದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ. ಭೀಕರ ರಸ್ತೆ ಅಪಘಾತ -ಓರ್ವ ಸಾವು, ಮೂವರಿಗೆ ಗಂಭೀರ ಗಾಯ.

Read More »

ಮಂಗನ ಕಾಯಿಲೆ ಪೀಡಿತರನ್ನು ಭೇಟಿ ಮಾಡಿದ ಹರತಾಳು ಹಾಲಪ್ಪ.

ಮಲೆನಾಡು ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಅರಲಗೋಡು ಗ್ರಾಪಂ ವ್ಯಾಪ್ತಿಯ 23 ಕ್ಕೂ ಹೆಚ್ಚು ರೋಗ ಪೀಡಿತರು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದು ಇವರನ್ನು ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಭೇಟಿ ಮಾಡಿದರು. ಹಾಗು ವೈದ್ಯರಿಂದ ಇವರ ಆರೋಗ್ಯ ಮಾಹಿತಿಯನ್ನು ಪಡೆದುಕೊಂಡರು..

Read More »

ಮಂಗನ ಕಾಯಿಲೆಗೆ ಮತ್ತೊಂದು ಬಲಿ.

  ಮಂಗನ ಕಾಯಿಲೆ ಯಿಂದ ತತ್ತರಿಸಿದ ಸಾಗರದ ಅರಳಗೋಡು ಗ್ರಾಮಪಂಚಾಯಿತಿ ವ್ಯಾಪ್ತಿಯ ವಾಟಮಕ್ಕಿ ಗ್ರಾಮದಲ್ಲಿ ಕೃಷ್ಣಪ್ಪ ಎಂಬ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕೃಷ್ಣಪ್ಪ, ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

Read More »