Breaking News

Tag Archives: ಕೆ.ಬಿ.ಶಿವಕುಮಾರ್

ಬಸ್, ರೈಲು ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕರೋನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ...

Read More »

ಈ ಬಾರಿ ಮನೆ ಗಣತಿಗೆ ಮೊಬೈಲ್ ಆ್ಯಪ್ ಬಳಕೆ- ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

  ಶಿವಮೊಗ್ಗ : ಜನಗಣತಿಗೆ ಪೂರ್ವಭಾವಿಯಾಗಿ ಏಪ್ರಿಲ್ 15 ರಿಂದ ಮೇ 29ರ ವರೆಗೆ ಜಿಲ್ಲೆಯಾದ್ಯಂತ ಮನೆ ಪಟ್ಟಿ ಮತ್ತು ಮನೆಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಹೊಸ ಸಭಾಂಗಣದಲ್ಲಿ ಜನಗಣತಿ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಮನೆಗಣತಿ ಕಾರ್ಯವನ್ನು ಮೊಬೈಲ್ ಆ್ಯಪ್ ಮೂಲಕ ಸಹ ನಡೆಸಲು ಅವಕಾಶ ಕಲ್ಪಿಸಲಾಗಿದೆ. ದೇಶ ಸ್ವಾತಂತ್ರ್ಯ ಪಡೆದ ಬಳಿಕ ನಡೆಯುತ್ತಿರುವ 8ನೇ ಜನಗಣತಿ ಇದಾಗಿದ್ದು, ಇದೇ ಮೊದಲ ...

Read More »

ಜಿಲ್ಲೆಯಲ್ಲಿ 14 ನೆರೆ ಪರಿಹಾರ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಜಿಲ್ಲೆಯ ಹಲವು ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಇದುವರೆಗೆ ಒಟ್ಟು 14 ನೆರೆ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ 7, ಭದ್ರಾವತಿ ಮತ್ತು ತೀರ್ಥಹಳ್ಳಿಯಲ್ಲಿ ತಲಾ ಒಂದು ಹಾಗೂ ಸೊರಬ ತಾಲೂಕಿನಲ್ಲಿ 5 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 2250 ಮಂದಿ ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪರಿಹಾರ ಕೇಂದ್ರ ವಿವರ: ಶಿವಮೊಗ್ಗ ನಗರದ ಇಮಾಮ್ ಬಾಡ, ಸೀಗೆಹಟ್ಟಿ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗುಡ್ಡೇಕಲ್, ಪುಟ್ಟಪ್ಪ ಕ್ಯಾಂಪ್, ...

Read More »