Breaking News

Tag Archives: ಚಾರುಲತಾ ಸೋಮಲ್‌

ಮಹಾನಗರಪಾಲಿಕೆಯ ಆಯುಕ್ತೆ ಚಾರುಲತಾ ಸೋಮಲ್ ವರ್ಗಾವಣೆ ಮಾಡದಂತೆ ಕಾಂಗ್ರೆಸ್ ಜೆ.ಡಿ.ಎಸ್ ಪಾಲಿಕೆ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

  ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಜನಪರವಾಗಿ ದಕ್ಷ ಹಾಗೂ ನಿಷ್ಪಕ್ಷಪಾತವಾಗಿ ಸೇವೆಸಲ್ಲಿಸಿದ ಪಾಲಿಕೆ ಆಯುಕ್ತ ಚಾರುಲತಾ ಸೋಮನ್ ರವರ ವರ್ಗಾವಣೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಜೆಡಿಎಸ್ ಪಕ್ಷದ ಪಾಲಿಕೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಮಾಹಾನಗರಪಾಲಿಕೆ ಸದಸ್ಯ ರಮೇಶ್ ಹೆಗಡೆಯವರು. “ಸರ್ಕಾರ ದಿಢೀರನೆ ಈ ವರ್ಗಾವಣೆ ಮಾಡಿರುವುದು ಖಂಡನೀಯ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ರಹಿತ ಪಾರದರ್ಶಕ ಅಧಿಕಾರವನ್ನು ನೀಡುವುದಾಗಿ ಹೇಳಿದ್ರು ಆದರೆ ಇಂತಹ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡ್ತಾ ಇರೋದು ನೋಡಿದರೆ ಈ ಸರ್ಕಾರ ಭ್ರಷ್ಟಾಚಾರ ಪರವಾದ ಸರ್ಕಾರ ಎನಿಸುತ್ತಿದೆ.ಮುಖ್ಯಮಂತ್ರಿಗಳು ...

Read More »

ತೆರೆದ ಮ್ಯಾನ್‍ಹೋಲ್‍ಗಳನ್ನು 10ದಿನಗಳ ಒಳಗಾಗಿ ಮುಚ್ಚದಿದ್ದರೆ ಕ್ರಿಮಿನಲ್ ಮೊಕದ್ದಮೆ: ಚಾರುಲತಾ ಸೋಮಲ್ ಎಚ್ಚರಿಕೆ

  ಶಿವಮೊಗ್ಗ ನಗರದ ಹಲವು ವಾರ್ಡ್‍ಗಳ ವ್ಯಾಪ್ತಿಯಲ್ಲಿ ತೆರೆದ ಮ್ಯಾನ್‍ಹೋಲ್‍ಗಳು ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಮ್ಯಾನ್‍ಹೋಲ್‍ಗಳನ್ನು 10ದಿನಗಳ ಒಳಗಾಗಿ ಮುಚ್ಚದಿದ್ದರೆ ಸಂಬಂಧಪಟ್ಟ ವ್ಯಾಪ್ತಿಯ ಇಂಜಿನಿಯರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಎಚ್ಚರಿಕೆ ನೀಡಿದ್ದಾರೆ. ವಾರ್ಡ್‍ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ತೆರೆದ ಮ್ಯಾನ್‍ಹೋಲ್‍ಗಳು ಕಂಡು ಬಂದಿದ್ದು, ಅವುಗಳನ್ನು ತಕ್ಷಣ ಮುಚ್ಚುವಂತೆ ಸಂಬಂಧಪಟ್ಟ ಇಂಜಿನಿಯರ್‍ಗಳಿಗೆ ಎಚ್ಚರಿಕೆ ನೀಡಲಾಗಿದೆ. ತೆರೆದ ಮ್ಯಾನ್‍ಹೋಲ್‍ಗಳಿಂದಾಗಿ ಯಾವುದೇ ಅವಘಡಗಳು ಸಂಭವಿಸುವ ಮೊದಲೇ ಮುಚ್ಚಬೇಕು. ತೆರೆದ ಮ್ಯಾನ್‍ಹೋಲ್‍ನಿಂದ ಅವಘಡಗಳು ...

Read More »

ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕುಗೊಳಿಸಿ: ಚಾರುಲತಾ ಸೋಮಲ್

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ತಿಳಿಸಿದರು. ಅವರು ಸ್ಮಾರ್ಟ್ ಸಿಟಿ ಕಚೇರಿ ಸಭಾಂಗಣದಲ್ಲಿ ಯೋಜನೆಯ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ತ್ವರಿತ ಅನುಷ್ಟಾನಕ್ಕೆ ಸೂಚನೆ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 52 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ 2 ಯೋಜನೆಗಳು ಪೂರ್ಣಗೊಂಡಿವೆ. 24 ಯೋಜನೆಗಳು ಪ್ರಗತಿಯಲ್ಲಿವೆ. 11 ಯೋಜನೆಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. 9 ಯೋಜನೆಗಳು ಡಿ.ಪಿ.ಆರ್ ಹಂತದಲ್ಲಿದ್ದು, 6 ಯೋಜನೆಗಳು ...

Read More »

ಆಯನೂರು ಮಂಜುನಾಥ್ ಹಾಗೂ ಕಮಿಷನರ್‌ ಚಾರುಲತಾ ಸೋಮಲ್‌ ನಡುವೆ ಮಾತಿನ ಚಕಮಕಿ

ಜಿಲ್ಲಾ ಉಸ್ತವಾರಿ‌ ಸಚಿವ ಡಿ.ಸಿ.ತಮ್ಮಣ್ಣ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸುವ ವೇಳೆ ಜನ ಬೀದಿ ದೀಪಗಳ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ಸಾರ್ವಜನಿಕವಾಗಿಯೇ ಮಾತಿನ ಚಕಮಕಿ ಮಾಡಿಕೊಳ್ಳುವ ಮೂಲಕ‌ ಹಾದಿರಂಪ ಮಾಡಿಕೊಂಡಿದ್ದಾರೆ. ನೀನು ಕಮಿಷನರ್ ಅಲ್ವಾ ಸಮಸ್ಯೆ ಪರಿಹರಿಸುವ ಎಂದು ಆಯನೂರು ಮಂಜುನಾಥ್ ಹೇಳಿದ್ದರಿಂದ ಸಿಟ್ಟಿಗೆದ್ದ ಚಾರುಲತಾ ಸೋಮಲ್‌ ಏಕವಚನದಲ್ಲಿ ಮಾತನಾಡಬೇಡಿ. ಹೀಗೆ ಏಕ ವಚನದಲ್ಲಿ‌ ಮಾತನಾಡಿದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ‌ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments