Breaking News

Tag Archives: ಶಿವಮೊಗ್ಗ ಸ್ಮಾರ್ಟ್ ಸಿಟಿ

ಸ್ಮಾರ್ಟ್ ಸಿಟಿ ಕಾಮಗಾರಿ ತ್ವರಿತ ಅನುಷ್ಟಾನಕ್ಕೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ 945ಕೋಟಿ ರೂ. ಮೊತ್ತದ ಅಂದಾಜಿನ 50ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದ್ದು, ಅನುಷ್ಟಾನ ಕಾರ್ಯ ಇನ್ನಷ್ಟು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಅತಿವೃಷ್ಟಿಯಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳೆದ ಕೆಲವು ತಿಂಗಳಿನಲ್ಲಿ ನಿರೀಕ್ಷಿತ ವೇಗದಲ್ಲಿ ನಡೆದಿರುವುದಿಲ್ಲ. ಇದೀಗ ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಅನುಷ್ಟಾನ ವೇಗ ಪಡೆದುಕೊಂಡಿದೆ. ಕಾಮಗಾರಿ ಅನುಷ್ಟಾನ ಇಲಾಖೆಗಳಾಗಿರುವ ಮೆಸ್ಕಾಂ, ನೀರು ...

Read More »

ಆಯನೂರು ಮಂಜುನಾಥ್ ಹಾಗೂ ಕಮಿಷನರ್‌ ಚಾರುಲತಾ ಸೋಮಲ್‌ ನಡುವೆ ಮಾತಿನ ಚಕಮಕಿ

ಜಿಲ್ಲಾ ಉಸ್ತವಾರಿ‌ ಸಚಿವ ಡಿ.ಸಿ.ತಮ್ಮಣ್ಣ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸುವ ವೇಳೆ ಜನ ಬೀದಿ ದೀಪಗಳ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ಸಾರ್ವಜನಿಕವಾಗಿಯೇ ಮಾತಿನ ಚಕಮಕಿ ಮಾಡಿಕೊಳ್ಳುವ ಮೂಲಕ‌ ಹಾದಿರಂಪ ಮಾಡಿಕೊಂಡಿದ್ದಾರೆ. ನೀನು ಕಮಿಷನರ್ ಅಲ್ವಾ ಸಮಸ್ಯೆ ಪರಿಹರಿಸುವ ಎಂದು ಆಯನೂರು ಮಂಜುನಾಥ್ ಹೇಳಿದ್ದರಿಂದ ಸಿಟ್ಟಿಗೆದ್ದ ಚಾರುಲತಾ ಸೋಮಲ್‌ ಏಕವಚನದಲ್ಲಿ ಮಾತನಾಡಬೇಡಿ. ಹೀಗೆ ಏಕ ವಚನದಲ್ಲಿ‌ ಮಾತನಾಡಿದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ‌ ...

Read More »