Breaking News

Tag Archives: BJP

ಯತ್ನಾಳ್ ಉಚ್ಚಾಟನೆ – ತಡವಾದ್ರೂ ಸರಿಯಾದ ಕ್ರಮ ಎಂದ ಶಾಸಕ ಚೆನ್ನಿ

ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...

Read More »

ಧನಂಜಯ ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್: ಆರೋಪಿ ಬಂಧಿಸಿದ ಕೋಟೆ ಪೊಲೀಸರು.

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಭದ್ರಾವತಿ ಮೂಲದ ಸೌಹಾರ್ಧ ಪಟೇಲ್(26) ಬಂಧಿತ ಆರೋಪಿ. ಆರೋಪಿಯು ಈ ಹಿಂದೆ ಕಾನೂನು ಪದವಿ ಓದುವಾಗ ಎನ್ಇಎಸ್ ಕಾರ್ಯದರ್ಶಿ ನಾಗರಾಜ್ ಅವರು ವಿಷಯವೊಂದರ ಕುರಿತಾಗಿ ಆರೋಪಿಗೆ ಬೈಯ್ದಿದ್ದರು. ಈ ಹಿನ್ನೆಲೆಯಲ್ಲಿ ಮನ ನೊಂದಿದ್ದ ಆರೋಪಿ ಸೌಹಾರ್ದ ಪಟೇಲ್‌, ಕೊರಿಯರ್‌ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿಯನ್ನು ...

Read More »

ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.

Cnewstv.in / 06.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿಯ ಸೋಬಿನಕೆರೆ ಶಾಲೆಯಲ್ಲಿ ಕೊರೊನಾ ಲಸಿಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ನಂತರ ಕೈ ಕೈ ಮಿಲಾಯಿಸಿದ್ದಾರೆ.‌ ಬಿಜೆಪಿ ಕಾರ್ಯಕರ್ತರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಣೆ ತೆಗೆದಾಗ ಗಲಾಟೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿ ದೂರು-ಪ್ರತಿದೂರು ನೀಡಿದ್ದಾರೆ. ಗಲಾಟೆಗೆ ಕಾರಣವಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ನಂತರ ...

Read More »

ಶಿವಮೊಗ್ಗ ನಗರದ 35 ವಾರ್ಡ್ ಗಳಿಗೆ ಸ್ಯಾನಿಟೈಜೇಷನ್

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೋವಿಡ್ ಸುರಕ್ಷಾಪಡೆ ಮತ್ತು ಸೇವಾ ಭಾರತಿ ಆಶ್ರಯದಲ್ಲಿ ಆಯೋಜಿಸಿದ್ದ ಸ್ಯಾನಿಟೈಜೇಷನ್ ಅಭಿಯಾನಕ್ಕೆ ಸಚಿವ ಕೆ.ಎಸ್.‌ ಈಶ್ವರಪ್ಪ ಸ್ವತಃ ಔಷಧಿ ‌ಸಿಂಪಡಿಸುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷ ಕೋವಿಡ್ ಸುರಕ್ಷಾಪಡೆ ವತಿಯಿಂದ ಎಲ್ಲ ನಾಗರಿಕರಿಗೆ ಉಚಿತವಾಗಿ ಆಯುಷ್‍ಕಿಟ್ ಕೊಡುವ ಮೂಲಕ ಕೊರೊನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಈ ಬಾರಿ ಇಡೀ ನಗರಕ್ಕೆ ಸ್ಯಾನಿಟೈಜ್ ಮಾಡಲಾಗುವುದು. ಇದಕ್ಕಾಗಿ ಆರು ವಾಹನಗಳು ಸಿದ್ಧವಾಗಿದ್ದು, ಪ್ರತಿ ವಾಹನ ...

Read More »

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೋನಾ ಸಹಾಯವಾಣಿ ಕೇಂದ್ರ ಆರಂಭ

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ. ಸೋಂಕಿತರನ್ನು ಯಾವ ಆಸ್ಪತ್ರೆಗೆ ಸೇರಿಸಬೇಕು, ವೆಂಟಿಲೇಟರ್, ವ್ಯಾಕ್ಸಿನೇಷನ್, ಆಂಬುಲೆನ್ಸ್ ಸೇರಿದಂತೆ ಪ್ರತಿಯೊಂದು ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ವತಿಯಿಂದ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಟಿ.ಡಿ ಮೇಘರಾಜ್ ಅವರು ತಿಳಿಸಿದ್ದಾರೆ. 1-ಆಸ್ಪತ್ರೆ ಮಾಹಿತಿಗಾಗಿ ಮತ್ತು ...

Read More »

ರಾಜ್ಯ ಕಾಂಗ್ರೆಸ್ ಗೆ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು

  ಶಿವಮೊಗ್ಗ : ಕೃಷಿ ಮಸೂದೆ ಬಗ್ಗೆ ಮೊದಲು 2012ರಲ್ಲಿ ಚರ್ಚೆ ಮಾಡಿದ್ದೇ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ಕಾಂಗ್ರೆಸ್ ಗೆ ಶಿಫಾರಸ್ಸು ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಕಾಂಗ್ರೆಸ್ ಚರ್ಚಿಸಿದ್ದ ಮಸೂದೆಯನ್ನೇ‌ ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಮಸೂದೆ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ.ಕೂಡಲೇ ರಾಜ್ಯದ ...

Read More »

ಕಾಂಗ್ರೆಸ್ ದಿವಾಳಿಯಾಗಿದೆ

ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಪೌರತ್ವ ವಿಧೇಯಕ ತಿದ್ದುಪಡಿ ಮಸೂದೆ ವಿಷಯವನ್ನಿಟ್ಟುಕೊಂಡು ದೇಶದಲ್ಲಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರ ನಡೆಸುತ್ತದೆ. ಅಧಿಕಾರ ಇಲ್ಲದಿರುವಾಗ ಗಲಭೆ ಎಬ್ಬಿಸುವ ಕೆಲಸ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ವಿಧೇಯಕವನ್ನು ಖಂಡಿಸಿ ದೇಶದ ಯಾವೊಬ್ಬ ಮುಸ್ಲಿಮನೂ ಪ್ರತಿಭಟನೆ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಗಲಭೆ ಎಬ್ಬಿಸುವ ಮೂಲಕ ರಾಜಕೀಯ ...

Read More »

ಜನರು ಇಟ್ಟ ನಂಬಿಕೆ ಗೆ ನಾವು ಮೋಸ ಮಾಡಿಲ್ಲ, ಉತ್ತಮ ಆಡಳಿತ ನಡೆಸಿದ್ದೇವೆ- ಎಸ್ ಎನ್ ಚನ್ನಬಸಪ್ಪ

ಶಿವಮೊಗ್ಗ: ಇಂದು ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು ಮಹಾನಗರ ಪಾಲಿಕೆ ಉಪಮೇಯರ್ ಎಸ್ ಎನ್ ಚನ್ನಬಸಪ್ಪ,, ಮಹಾನಗರಪಾಲಿಕೆಯಲ್ಲಿ ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ಮಂಡಳಿ ಉತ್ತಮ ಕೆಲಸ ಮಾಡುವ ಮೂಲಕ ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇವುಗಳನ್ನು ಮಾಡುವ ಸಂದರ್ಭದಲ್ಲಿ ನಾಗರಿಕರಿಗೆ ಒಂದಿಷ್ಟು ತೊಂದರೆಯಾಗಿರುವುದು ನಿಜ. ಆದರೆ ಅಭಿವೃದಿಯಾಗಬೇಕಾದರೆ ಸಣ್ಣಪುಟ್ಟ ತೊಂದರೆಗಳು ಸಹಜವಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತವೆ. ಈಗಾಗಲೇ ಅಭಿವೃದಿಯ ಉತ್ತಮ ಹೆಜ್ಜೆ ಇಟ್ಟಿದ್ದೇವೆ. ಮುಂದಿನ ಎರಡು ವರ್ಷಗಳ ಅವಧಿ ಯಲ್ಲಿ ...

Read More »

ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ರಾಣೆಬೆನ್ನೂರು ಅಭ್ಯರ್ಥಿ!

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಅವರು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಹೌದು ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಕಾಂತೇಶ್ ಅಭಿಮಾನಿಗಳು ಒತ್ತಾಯಿಸಲಾರಂಭಿಸಿದ್ದಾರೆ. ಈ ಬಗ್ಗೆ ಪೇಸ್ ಬುಕ್ ನಲ್ಲಿ ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಕಾಂತೇಶಣ್ಣ ಎಂಬ ಪೇಜನ್ನು ಓಪನ್ ಮಾಡಿದ್ದಾರೆ. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ದಯವಿಟ್ಟು ಕಾಂತೇಶ್ ...

Read More »

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »