ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಬಹುದಿನದ ಬೇಡಿಕೆಯಾಗಿದ್ದ ಔರದ್ಕರ್ ವರದಿಯನ್ನು ದೀಪಾವಳಿಯಿಂದ ಜಾರಿಗೊಳಿಸಲಾಗುವುದು ಎಂದು ಇತ್ತೀಚೆಗೆ ಸಿಎಂ ಬಿ.ಎಸ್.ವೈ ಹೇಳಿದ ಬೆನ್ನಲ್ಲೇ ಈ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆಗಳು ಆರಂಭವಾಗಿದ್ದವು. ಆದರೆ ಈಗ ಪೊಲೀಸ್ ಸಿಬ್ಬಂದಿಗಳೇ ಸಿಎಂಗೆ ಪತ್ರ ಬರೆದು ಔರಾದ್ಕರ್ ವರದಿಯನ್ನ ರದ್ದುಗೊಳಿಸಿ ಎಂದು ಒತ್ತಾಯಿಸಿದ್ದಾರೆ. ವೇತನ ತಾರತಮ್ಯ ನಿವಾರಣೆಗಾಗಿ ಔರಾದ್ಕರ್ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಆದರೆ ವರದಿ ಸಿದ್ಧಪಡಿಸುವಾಗ ಆರ್ಥಿಕ ಇಲಾಖೆ ತನ್ನ ಚಾಣಾಕ್ಷ್ಯತನವನ್ನು ತೋರಿಸಿದೆ ಎಂದು ಆರೋಪಿಸಲಾಗಿದು. ಡಿಜಿ ಹಾಗೂ ಐಜಿ ಹೊರಡಿಸಿದ್ದ ಫಿಟ್ಮೆಂಟ್ ಅಂತ ಮೂಲ ವೇತನ ನಿಗದಿಯಾಗಬೇಕಿತ್ತು. ಆದರೆ ಅದನ್ನು ರದ್ದುಪಡಿಸಿ ಕೇವಲ ಹೊಸದಾಗಿ ಸೇರ್ಪಡೆಯಾದ ಸಿಬ್ಬಂದಿಗೆ ಮಾತ್ರ ವೇತನ ನಿಗದಿ ಮಾಡಲಾಗಿದೆ. ಇದರಿಂದ ಔರಾದ್ಕರ್ ವರದಿ ಮೂಲ ಉದ್ದೇಶವನ್ನೇ ಮರೆಮಾಚಲಾಗಿದೆ ಎಂದು ಹೇಳಲಾಗುತ್ತಿದೆ.. ಈಗಿನ ವರದಿಯು ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಗೃಹ ಸಚಿವರು ತೀರ್ಮಾನಿಸಿ ಜಾರಿಗೊಳಿಸಿದಂತಿಲ್ಲ. ಈ ವರದಿಯ ಜಾರಿಯಿಂದ ಪೊಲೀಸರ ಜೀವನ ಮಟ್ಟ ಸುಧಾರಿಸುತ್ತೆ ಎಂದು ನಂಬಲಾಗಿತ್ತು. ಆದರೆ ಆರ್ಥಿಕ ಇಲಾಖೆಯು ಪೊಲೀಸ್ ಇಲಾಖೆಯ ಬಹುದಿನದ ಬೇಡಿಕೆಗೆ ತಣ್ಣೀರೆರಚಿದೆ. ವರದಿಯ ಮೂಲ ಉದ್ದೇಶವನ್ನು ಬಿಟ್ಟು ಆರ್ಥಿಕ ಇಲಾಖೆಯು ಹೊಸದಾಗಿ ವರದಿಯನ್ನು ಮಾರ್ಪಾಡು ಮಾಡಿರುವ ವರದಿ ಜಾರಿಯಾದ್ರೆ ವೇತನ ತಾರತಮ್ಯದಿಂದ ಪೊಲೀಸರು ವೈಯಕ್ತಿಕವಾಗಿ ಖಿನ್ನತೆಗೆ ಒಳಗಾಗೋ ಸಾಧ್ಯತೆ ಇದೆ..ಈ ವರದಿಯಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಶೇ95ರಷ್ಟು ಸಿಬ್ಬಂದಿಗೆ ಒಂದು ರೂಪಾಯಿ ಪ್ರಯೋಜನವಿಲ್ಲ. ಆದ್ದರಿಂದ ಸರ್ಕಾರ ರಾಘವೇಂದ್ರ ಔರಾದ್ಕರ್ ವರದಿಯ ಮೂಲ ಉದ್ದೇಶದ ಬೇಡಿಕೆಯನ್ನು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv