ಸಾಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಟವೆರಾ ಕಾರೊಂದು ಚಾಲನೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ 1.30 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಸಾಗರದ ಕಡೆ ಬರುತ್ತಿದ್ದ ಕಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಟವೆರಾ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು,ಕಾರಿನಲ್ಲಿದ್ದ ಓರ್ವನಿಗೆ ಸಣ್ಣ ಪುಟ್ಟ ಸುಟ್ಟ ಗಾಯವಾಗಿದೆ. ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳಾದ ವಿಲ್ಫ್ರೆಡ್,ಜೆ.ರವಿ,ಪ್ರಕಾಶ್,ರವಿಕುಮಾರ್,ಕುಮಾರಸ್ವಾಮಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇಮ್ರಾನ್ ಸಾಗರ್
Read More »Tag Archives: Car
ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
ಇದ್ದಕ್ಕಿದ್ದಂತೆ ಕಾರೊಂದು ಹೊತ್ತಿ ಉರಿದ ಘಟನೆ ಸಾಗರದ ಸಮೀಪ ಬಳಸಗೋಡಿನಲ್ಲಿ ನಡೆದಿದೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಶಿವಮೊಗ್ಗ ನೊಂದಣಿಯ ಟಾಟಾ ಇಂಡಿಗೋ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯ ಇಲ್ಲ. ಇಮ್ರಾನ್ ಸಾಗರ್’
Read More »
C News TV Kannada News Online in cnewstv