ಶಿವಮೊಗ್ಗ: ಸೈಕಲ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಸೈಕಲ್ ಸವಾರ ಅಣ್ಣಪ್ಪ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ- 206 ರಲ್ಲಿ ತಾಳಗುಪ್ಪದ ಬಳಿ ನಡೆದ ಘಟನೆ ನಡೆದಿದ್ದು, ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.
Read More »Tag Archives: death
ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆ
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ...
Read More »
Recent Comments