Breaking News

Tag Archives: Fire accident

ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್

ಶಿವಮೊಗ್ಗ: ಮಂಗಳೂರಿನಿಂದ ದಾವಣಗೆರೆಗೆ ಚಲಿಸುತ್ತಿದ್ದ ಖಾಸ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕ ಮತ್ತು ಬಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮಂಗಳೂರಿನಿಂದ ರಾತ್ರಿ ಹೊರಟಿದ್ದ ಖಾಸಗಿ ಬಸ್ ನಲ್ಲಿ 18 ಜನ ಪ್ರಯಾಣಿಕರಿದ್ದರು. ಬೆಳಗಿನ ಜಾವ ಸಕ್ರೆಬೈಲು ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪ್ರಯಾಣಿಕರನ್ನ ಕೆಳಗೆ ಇಳಿಸಿದ ಬಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ...

Read More »

ಧಗ ಧಗನೆ ಹೊತ್ತಿ ಉರಿದ ಟವೆರಾ ಕಾರು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರು.

    ಸಾಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಟವೆರಾ ಕಾರೊಂದು ಚಾಲನೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ 1.30 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಸಾಗರದ ಕಡೆ ಬರುತ್ತಿದ್ದ ಕಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಟವೆರಾ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು,ಕಾರಿನಲ್ಲಿದ್ದ ಓರ್ವನಿಗೆ ಸಣ್ಣ ಪುಟ್ಟ ಸುಟ್ಟ ಗಾಯವಾಗಿದೆ. ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳಾದ ವಿಲ್ಫ್ರೆಡ್,ಜೆ.ರವಿ,ಪ್ರಕಾಶ್,ರವಿಕುಮಾರ್,ಕುಮಾರಸ್ವಾಮಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇಮ್ರಾನ್ ಸಾಗರ್

Read More »

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

ಇದ್ದಕ್ಕಿದ್ದಂತೆ ಕಾರೊಂದು ಹೊತ್ತಿ ಉರಿದ ಘಟನೆ ಸಾಗರದ ಸಮೀಪ ಬಳಸಗೋಡಿನಲ್ಲಿ ನಡೆದಿದೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಶಿವಮೊಗ್ಗ ನೊಂದಣಿಯ ಟಾಟಾ ಇಂಡಿಗೋ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯ ಇಲ್ಲ. ಇಮ್ರಾನ್ ಸಾಗರ್’

Read More »