Breaking News

Tag Archives: Govt of Karnataka

ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್​ ಅವರಿಗೆ ನೋಟಿಸ್​ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್​ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...

Read More »

ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು: 2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನವನ್ನ ಅಡವಿಟ್ಟು 62.77 ಕೋಟಿ ರೂ. ಸಾಲ ನೀಡಿ, ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಅವರನ್ನ ಇಡಿ ಅರೆಸ್ಟ್ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿನ್ನೆಯಿಂದಲೂ ತೀವ್ರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಇಂದು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ಅಪೆಕ್ಸ್ ಬ್ಯಾಂಕ್ ನ ...

Read More »

ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು

ಶಿವಮೊಗ್ಗ: ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಆಹ್ವಾನದ ಮೇರೆಗೆ ಸೊರಬ ತಾಲೂಕಿನ ವಿವಿಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಗೆ ಭೇಟಿ ನೀಡಿ, ಚಳಿಗಾಲದ ಅಧಿವೇಶನ ವೀಕ್ಷಿಸಿದ್ದಾರೆ. ಸೊರಬದ ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವುದಕ್ಕೆ ಉಭಯ ಸದನದ ಸಭಾಪತಿಗಳಿಂದ ಸಚಿವ ಮಧು ಬಂಗಾರಪ್ಪ ಮೊದಲೇ ಅನುಮತಿ ಪಡೆದಿದ್ದ ಹಿನ್ನೆಲೆ ಬೆಳಗಾವಿಗೆ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಸೊರಬ ತಾಲೂಕಿನ ಸಿರಿವಂತೆ, ಸೊರಬ, ಉಳವಿ ಹಾಗೂ ಆನವಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 350ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ...

Read More »