Breaking News

Tag Archives: JDS

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು. ...

Read More »

ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ

  ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ .. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ  ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ . ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ: ಏಪ್ರಿಲ್ 20 ರಂದು ಬೆಳಗ್ಗೆ ...

Read More »

ಜೆಡಿಎಸ್ ಜನರಿಗೆ ಮಾಡಿರುವ ಮೋಸಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ – ಶಾಸಕ ಕುಮಾರ್ ಬಂಗಾರಪ್ಪ,

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಜೆಡಿಎಸ್ ನವರು ಅಬಂರೀಷ್ ಸಾವಿನಲ್ಲೂ ರಾಜಕಾರಣ ಮಾಡಿದ್ದರೆ. ರಾಜ್ಯದ ಜನರಿಗೂ ಮೋಸ ಮಾಡಿದ್ದಾರೆ. ಇವರು ಮಾಡಿರುವ ಮೋಸಕ್ಕೆ ತುಮಕೂರು, ಮಂಡ್ಯ ಹಾಸನ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಇನ್ನು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಒಬ್ಬ ಇಂಪೋರ್ಟೆಡ್ ಕ್ಯಾಂಡಿಡೇಟ್. ಆತ ಮಂಗನಕಾಯಿಲೆ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾನೆ. ಮಧುಬಂಗಾರಪ್ಪನವರಿಗೆ ಲೂಟಿ ಮಾಡುವುದು ಹೇಗೆ ಎಂದು ಅವರಿಗೆ ಗೊತ್ತಿದೆ. ಶರಾವತಿ ಡೆಂಟಲ್ ಕಾಲೇಜು, ಬಗರ್ ಹುಕುಂ ನಲ್ಲೂ ಮಧುಬಂಗಾರಪ್ಪ ಲೂಟಿ ...

Read More »

ಬಿಜೆಪಿ ಭದ್ರ ಕೋಟೆಯಲ್ಲಿ ಮೈತ್ರಿ ಪಕ್ಷದ ಶಕ್ತಿ ಪ್ರದರ್ಶನ..

ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ರಾಲಿಯನ್ನು  ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹಮ್ಮಿಕೊಂಡಿದ್ದರು. ‌ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿಸಿತ್ತು.   ಮಧು ಬಂಗಾರಪ್ಪನವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯ ಕ್ವಿಕ್ ಲುಕ್.

Read More »

ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಂತೆ ಯಡಿಯೂರಪ್ಪ ಕೂಡ ಮೂಲೆಗುಂಪಾಗಲಿದ್ದಾರೆ – ಬೇಳೂರು ಗೋಪಾಲಕೃಷ್ಣ

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಅವರು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ದುರಂತದ ಸಂಗತಿ. ಹೇಗೆ ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಾರೇ ಹಾಗೇ ಯಡಿಯೂರಪ್ಪ ಅವರನ್ನೂ ಮೂಲೆಗುಂಪು ಮಾಡುವುದು ಖಚಿತ. ಇನ್ನೂ ಸದಾನಂದ ಗೌಡರೇ ಚುನಾವಣೆ ಬಳಿಕ ಯಡಿಯೂರಪ್ಪ ಅಧ್ಯಕ್ಷರಾಗಿ ಇರುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.. ಬಿಜೆಪಿಯವರು ಮಾತು ಮಾತಿಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾವೂ ಹಿಂದುಗಳೆ, ನಾವು ಹಿಂದುತ್ವದ ಪಾಠ ಅವರಿಂದ ಕಲಿಯಬೇಕಿಲ್ಲ ಎಂದು ಟಾಂಗ್ ನೀಡಿದರು. ಬಿಜೆಪಿಯವರು ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಆಸ್ತಿ 9 ಕೋಟಿ ...

Read More »

ಶಿವಮೊಗ್ಗ ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಟಿಬಿ ಜಗದೀಶ್ ಬಿಜೆಪಿಗೆ ಸೇರ್ಪಡೆ

  ಶಿವಮೊಗ್ಗ ಗ್ರಾಮಾಂತರದ ಪ್ರಭಾವಿ ನಾಯಕ ಜೆಡಿಎಸ್ ನ ಅಧ್ಯಕ್ಷ ಶ್ರೀ ಟಿಬಿ ಜಗದೀಶ್ ರವರಿಗೆ ಎಪಿಎಂಸಿ ಚುನಾವಣೆಯ ಸಂದರ್ಭದಲ್ಲಿ ಅಧ್ಯಕ್ಷನಾಗಿ ಮಾಡುತ್ತೇವೆ ಎಂಬ ಆಶ್ವಾಸನೆಯನ್ನು ಹೆಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ,ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ನೀಡಿದ್ದರು. ಅದರೆ ಅವರು ನೀಡಿದ ಮಾತನ್ನು ಉಳಿಸಿಕೊಳ್ಳದೆ, ಪಕ್ಷದಲ್ಲಿ ಅವರನ್ನು ನಡೆಸಿಕೊಂಡ ನೀತಿಗೆ ಬೇಸತ್ತು, ನಾಳೆ ಸಂಜೆ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಎಲ್ಲಾ ನಾಯಕರ ಸಮೂಕದಲ್ಲಿ ಬಿಜೆಪಿ ಸೇರಲಿದ್ದಾರೆ.. ಜಗದೀಶ್ ಸೇರ್ಪಡೆ ಚುನಾವಣೆಯ ಮೇಲೆ ಪ್ರಭಾವವನ್ನು ಬೀರಲಿದೆ.

Read More »

ಜೆಡಿಎಸ್ ಕಾರ್ಯಕರ್ತರ ನಡವಳಿಕೆಗೆ ಧಿಕ್ಕಾರ – ಬಿಜೆಪಿ

  ಹಾಸನದ ಶಾಸಕ ಪ್ರೀತಂಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯ ಸರಿಯಲ್ಲ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಗೂಂಡಾ ಪ್ರವೃತ್ತಿಯನ್ನು ನಡೆಸುತ್ತಿದ್ದಾರೆ, ಇದನ್ನು  ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ. ದತ್ತಾತ್ರಿ, ಡಿ ಎಸ್ ಅರುಣ್, ಹಿರಣ್ಣಯ್ಯ ಮಾಹನಗರಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments