ಶಿವಮೊಗ್ಗ : ಕೃಷಿ ಮಸೂದೆ ಬಗ್ಗೆ ಮೊದಲು 2012ರಲ್ಲಿ ಚರ್ಚೆ ಮಾಡಿದ್ದೇ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ಕಾಂಗ್ರೆಸ್ ಗೆ ಶಿಫಾರಸ್ಸು ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಕಾಂಗ್ರೆಸ್ ಚರ್ಚಿಸಿದ್ದ ಮಸೂದೆಯನ್ನೇ ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಮಸೂದೆ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ.ಕೂಡಲೇ ರಾಜ್ಯದ ...
Read More »Tag Archives: National congress
ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.
ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.. https://youtu.be/7FHDhDVPZJY
Read More »ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ 19ಕ್ಕೆ
ಶಿವಮೊಗ್ಗ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ. ಹೀಗೊಂದು ಪ್ರಶ್ನೆ ಇದೀಗ ಉದ್ಭವಿಸಿದೆ. ಎರಡು ದಿನಗಳ ಹಿಂದೆ ಕಾಯ್ದೆ ವಿರೋಧಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 19 ರಂದು ಜಿಲ್ಲಾ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಆದರೆ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ...
Read More »
C News TV Kannada News Online in cnewstv