ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ನೋಟಿಸ್ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...
Read More »Tag Archives: News
ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು
ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ
ಶಿವಮೊಗ್ಗ : ತಾಲೂಕಿನ ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಗರದಿಂದ ಬಸ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದ ಪ್ರಯಾಣಕರಿಗೆ ಕೆಎಸ್ಆರ್ಟಿಸಿ ಇಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗವು ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಹಾಗೂ ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, ...
Read More »ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನ ನಿಷೇಧಿಸಿ, ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಲಾಗಿದೆ. ಏ.06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ. 10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.06 ಮತ್ತು 10 ರಂದು ಎರಡು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ...
Read More »ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳು ಹೆಚ್ಚಾಗಿದ್ದು, ಮೂರು ದಿನಗಳಲ್ಲಿ ಅವುಗಳನ್ನು ಖಾಲಿ ಮಾಡುವಂತೆ ಹಂದಿ ಮಾಲೀಕರಿಗೆ ಮಹಾನಗರ ಪಾಲಿಕೆ ಎಚ್ಚರಿಕೆಯ ಕರೆ ನೀಡಿದೆ. ಶಿವಮೊಗ್ಗ ನಗರದಲ್ಲಿ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ಹಂದಿ ಸಾಕಾಣಿಕೆ ಮಾಲೀಕರ ವಿರುದ್ಧ ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರು ನೀಡಿದ್ದಾರೆ. ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪಾಲಿಕೆಯು ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ...
Read More »ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ
ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ...
Read More »ಶಿವಮೊಗ್ಗದಲ್ಲಿ ಸಂಭ್ರಮದಿಂದ ರಂಜಾನ್ ಆಚರಣೆ: ವ್ಯಾಪಕ ಬಂದೋಬಸ್ತ್
ಶಿವಮೊಗ್ಗ : ಶಾಂತಿ ಮತ್ತು ಸೌಹಾರ್ದತೆ ಸಾರುವ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮೂದಾಯದವರು ಇಂದು ಶಿವಮೊಗ್ಗ ನಗರ ಸೇರಿದಂತೆ ರಾಜ್ಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ಶಿವಮೊಗ್ಗ ಡಿಸಿ ಕಚೇರಿ ಸಮೀಪದ ಈದ್ಗಾ ಮೈದಾನ, ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಯ ಮೈದಾನ ಸೇರಿದಂತೆ ಹಲವೆಡೆ ರಂಜಾನ್ ಹಿನ್ನೆಲೆ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆಯಿಂದಲೇ ಮುಸ್ಲಿಂ ಬಾಂಧವರು ಹೊಸಬಟ್ಟೆ ಉಟ್ಟು ಮಕ್ಕಳು ಸಹಿತ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮುಸ್ಲಿಂ ಧರ್ಮ ಗುರುಗಳು ರಂಜಾನ್ ಹಬ್ಬದ ಮಹತ್ವದ ಬಗ್ಗೆ ...
Read More »ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ- 18 ಲಕ್ಷ ರೂ. ಸಂಗ್ರಹ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ಯಶಸ್ವಿಯಾಗಿ ನಡೆಯಿತು. ದೇವಸ್ಥಾನದ ಜಾತ್ರೆ ಹಾಗೂ ಹುಣ್ಣಿಮೆಯಲ್ಲಿ ಭಕ್ತರ ಮೂಲಕ ಸಂಗ್ರಹವಾದ ಕಾಣಿಕೆ ಹಣದ ಎಣಿಕೆಯನ್ನು ಸೊರಬ ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ನೇತೃತ್ವದಲ್ಲಿ ನಡೆಸಲಾಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 18,18,480 ರೂ. ಕಾಣಿಕೆ ಸಂಗ್ರವಾಗಿದೆ. ಇನ್ನು ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಸಹ ಆಳವಡಿಸಲಾಗಿತ್ತು. ಹುಂಡಿ ಎಣಿಕೆ ಕಾರ್ಯದಲ್ಲಿ ...
Read More »ಯತ್ನಾಳ್ ಉಚ್ಚಾಟನೆ – ತಡವಾದ್ರೂ ಸರಿಯಾದ ಕ್ರಮ ಎಂದ ಶಾಸಕ ಚೆನ್ನಿ
ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...
Read More »
C News TV Kannada News Online in cnewstv