ಶಿವಮೊಗ್ಗ: ನಗರ ಹೊರವಲಯದ ತ್ಯಾವರೆಕೊಪ್ಪ ಮೃಗಾಲಯದಲ್ಲಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಸಾವನ್ನಪ್ಪಿದೆ. ವಯೋಸಹಜವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹುಲಿ ವಿಜಯ್ ನಿನ್ನೆ ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ಸ್ನಾಯು ನೋವಿನಿಂದಾಗಿ ಆಹಾರವನ್ನು ತ್ಯಜಿಸಿತ್ತು. ಕಳೆದ ಒಂದು ತಿಂಗಳಿಂದ ಯಾವುದೇ ಚಟುವಟಿಕೆಯಿಲ್ಲದೇ ಇದ್ದ ಹುಲಿಯನ್ನ ಸಫಾರಿಯ ಹುಲಿ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಆದರೇ, ಚಿಕಿತ್ಸೆ ಫಲಿಸದೇ ನಿನ್ನೆ ಹುಲಿ ವಿಜಯ್ ಮೃತಪಟ್ಟಿದ್ದು, ಮೃಗಾಲಯ ನಿಯಮಾವಳಿಯಂತೆ ಅಂತ್ಯಸಂಸ್ಕಾರವನ್ನ ನೆರವೇರಿಸಲಾಗಿದೆ. ಇನ್ನು ಹುಲಿ ವಿಜಯ್ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗಂಡು ಹುಲಿಗಳೇ ಇಲ್ಲದಂತಾಗಿದ್ದು, ...
Read More »Tag Archives: Safari
ಸಕ್ರೆಬೈಲು ಹಿರಿಯ ಆನೆ ಗೀತಾ ಇನ್ನಿಲ್ಲ
ಶಿವಮೊಗ್ಗ: ರಾಜ್ಯದ ಆನೆ ಬಿಡಾರಗಳಲ್ಲೇ ಅತಿ ಹಿರಿಯ ಆನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ. ವಯೋಸಹಜ ಕಾರಣದಿಂದ ಗೀತಾ ಆನೆ ಕಳೆದ ನಾಲ್ಕು ದಿನದಿಂದ ಆಹಾರವನ್ನು ತ್ಯಜಿಸಿತ್ತು. ಇಂದು ಬೆಳಗ್ಗೆ ಸಕ್ರೆಬೈಲು ಕ್ರಾಲ್ ಸಮೀಪ ಮೃತಪಟ್ಟಿದೆ. ಗೀತಾ ಆನೆಯನ್ನು 1968ರಲ್ಲಿ ಕಾಕನಕೋಟೆಯಲ್ಲಿ ಸೆರೆ ಹಿಡಿದು ಪಳಗಿಸಿ ಬಳಿಕ ಸಕ್ರೆಬೈಲು ಆನೆ ಬಿಡಾರಕ್ಕೆ ತರಲಾಗಿತ್ತು. ರಾಜ್ಯದ ಅತಿ ಹಿರಿಯ ಆನೆ ಮೃತಪಟ್ಟಿರುವುದು ನೋವಿನಸಂಗತಿಯಾಗಿದೆ.
Read More »
C News TV Kannada News Online in cnewstv