Tag Archives: Sagara

ಪುರಾತನ ಪ್ರಸಿದ್ಧ ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಮುಂದಾದ ರಾಕಿ ಬಾಯ್

cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಕಿಂಗ್ ಸ್ಟಾರ್ ಯಶ್ ಕೇವಲ ತಮ್ಮ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಬರದ ಹೊತ್ತಿನಲ್ಲಿ ಕರ್ನಾಟಕದ ಹಲವು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆ ಕಾಯಕದ ಮೂಲಕ ಅನೇಕರಿಗೆ ಪ್ರೇರಣೆ ಕಾರ್ಯ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ನೇತೃತ್ವದ ಯಶೋಮಾರ್ಗ ಇದೀಗ ಶಿವಮೊಗ್ಗದ ಪುರಾಣ ಪ್ರಸಿದ್ಧ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ. ಸುಮಾರು 400 ...

Read More »

ಕೆರೆಗೆ ಬಿದ್ದ ಕೆ.ಎಸ್.ಅರ್ .ಟಿ.ಸಿ ಬಸ್

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರದಿಂದ ಶಿವಮೊಗ್ಗದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾಗಿದೆ. ಸಾಗರ ತಾಲೂಕಿನ ಕಾಸ್ಪಡ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಆಯತಪ್ಪಿ ಬಸ್ ಕೆರೆಗೆ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 27 ಜನ ಪ್ರಯಾಣಿಕರಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ ಇನ್ನುಳಿದಂತೆ ಗಾಯಗೊಂಡಿರುವ ಪ್ರಯಾಣಿಕರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕಾಗಮಿಸಿದ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ...

Read More »

ರಾತ್ರೋರಾತ್ರಿ ಲಾಡ್ಜ್ ಕೊಠಡಿಯಲ್ಲಿ ಬೆಂಕಿ, ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ.‌

Cnewstv.in / 12.07.2021 /ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರ ತಾಲೂಕಿನ ಕಾರ್ಗಿಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಂದಾರ ಕಂಪಾರ್ಟ್ ಲಾಡ್ಜಿನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೂಮಿನಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಹಾಸಿಗೆ, ಪೀಠೋಪಕರಣಗಳು ಸೇರಿದಂತೆ ಸುಮಾರು ಒಂದು ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಾರ್ಗಲ್ ಪೊಲೀಸರು ಲಾಡ್ಜಿನ ಇತರ ರೂಮಿನಲ್ಲಿದ್ದ ಜನರನ್ನ ಸುರಕ್ಷಿತವಾಗಿ ಹೊರ ಕರೆದುಕೊಂಡು ಬಂದಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ...

Read More »

ಶಿವಮೊಗ್ಗ : ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ

Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ತಾಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದ ನವೀನ್ (18) ಕಾಲು ಕಳೆದುಕೊಂಡ ದುರ್ದೈವಿ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಪ್ಲಾಟ್ ಫಾರ್ಮ್ ಜಾರಿದ ಪರಿಣಾಮ ನವೀನ್ ಕೆಳಗೆ ಬಿದ್ದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ...

Read More »

ಮತ್ತೆ ಪ್ರವಾಸಿಗರಿಂದ ತುಂಬಿದ ವಿಶ್ವವಿಖ್ಯಾತ ಜೋಗ ಜಲಪಾತ

Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಕೊರೊನಾದಿಂದ ಕಳೆದ ಎರಡು ತಿಂಗಳಿನಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಇಂದಿನಿಂದ ಪ್ರವಾಸಿ ತಾಣಗಳ ವೀಕ್ಷಣೆಗೆ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ‌ 5 ಗಂಟೆಯವರೆಗೆ ಜೋಗ ವೀಕ್ಷಣೆಗೆ ಪ್ರವಾಸಿಗರಿಗೆ ಅನುಮತಿಯನ್ನು ನೀಡಲಾಗಿತ್ತು. ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ತುಂಬಿದೆ. ರಾಜಾ ರಾಣಿ ರೋರರ್ ರಾಕೆಟ್ ಜಲಪಾತಗಳಲ್ಲಿ ನೀರು ಧುಮುಕುವ ದೃಶ್ಯ ರಮಣೀಯವಾಗಿ ಕಾಣಿಸುತ್ತಿದೆ. ರೀ ...

Read More »

ಯುವತಿಗೆ ಸಾಗರದಲ್ಲಿ 2 ಗಂಟೆ ಆಪರೇಷನ್, ವೈದ್ಯರಿಗೆ ಕಾದಿತ್ತು ಶಾಕ್

ಸಾಗರ : ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸತತ ಎರಡು ಗಂಟೆ ಆಪರೇಷನ್‌ ಮಾಡಿ, 8 ಕೆ.ಜಿ. ತೂಕದ ಗಡ್ಡೆಯನ್ನು ಹೊರ ತೆಗೆಯಲಾಗಿದೆ.ಸಾಗರದ ತಾಯಿ ಮತ್ತು ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್‌ ನಡೆಸಲಾಯಿತು. ಸೊರಬ ತಾಲೂಕಿನ 21 ವರ್ಷದ ಯುವತಿಯೊಬ್ಬಳು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಚಿಕಿತ್ಸೆಗೆ ಬಂದಾಗ ಸ್ಕ್ಯಾನಿಂಗ್‌ ನಡೆಸಲಾಗಿತ್ತು. ಆಗ ಗಡ್ಡೆ ಇರುವುದು ಗೊತ್ತಾಗಿತ್ತು. ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಸಿವಿಲ್‌ ಸರ್ಜನ್‌ ಡಾ.ಪ್ರಕಾಶ್‌ ಬೋಸ್ಲೆ, ಸಿಬ್ಬಂದಿಗಳಾದ ರೀಟಾ, ರೋಹಿಣಿ, ಚಂದ್ರು ಸೇರಿದಂತೆ ಹಲವು ಸಿಬ್ಬಂದಿಗಳು ಅಪರೇಷನ್‌ ನಡೆಸಿದರು. ಸತತ ಎರಡು ಗಂಟೆ ಆಪರೇಷನ್‌ ನಡೆಸಿ, ...

Read More »

ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು.

ಶಿವಮೊಗ್ಗ:ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಅಂಜಲಿ(19) ಮೃತ ದುರ್ದೈವಿ. ದನಗಳಿಗೆ ನೀರು ಕುಡಿಸಲು ಎಂದಿನಂತೆಯೇ ಬೆಳಿಗ್ಗೆ ಬಾವಿಗೆ ಹೋಗಿದ್ದ ಅಂಜಲಿ, ನೀರು ಸೇದುವಾಗ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ನೀರು ತರಲು ಹೋಗಿದ್ದ ಅಂಜಲಿ ಬಾರದಿದ್ದನ್ನು ಗಮನಿಸಿ, ಮನೆಯವರು ಬಾವಿಯ ಬಳಿಗೆ ಬಂದು ಪರಿಶೀಲಿಸಿದಾಗ ಅಂಜಲಿ ಬಾವಿಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತ್ಯಾಗರ್ತಿ ಗ್ರಾಮಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.

Read More »

ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್, ಸಿಪಿಐ ಅಮಾನತ್ತಿಗೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.‌ ಸಾಗರ ವಕೀಲ ಪ್ರವೀಣ್ ಎಂಬುವರು ನೀಡಿದ ದೂರಿನ‌ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಪ್ರವೀಣ್ ನೀಡಿದ ಸುಳ್ಳು ದೂರು ಆಧರಿಸಿ ಎಫ್ ಐ ಆರ್ ದಾಖಲಿಸಿದ ಸಾಗರ ಪಟ್ಟಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ಎಎಸ್ ಪಿ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ನ ...

Read More »

ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಬಹುಜನರ ಧಾರ್ಮಿಕ-ಸಾಂಸ್ಕೃತಿಕ ಉತ್ಸವ

  ಶಿವಮೊಗ್ಗದ ಕೋಟೆ ಶ್ರೀಮಾರಿಕಾಂಬಾ ದೇವಿ ಜಾತ್ರೆ ನಾಡಿನ ಜನಮನ ಸೆಳೆದ . ಆಸ್ತಿಕ ಭಕ್ತರನ್ನು ಸೂಜಿಗಲ್ಲಿನಂತೆ ಸೆಳೆವ ಜಾತ್ರೆ. ಶಿರಸಿ, ಸಾಗರದ ಮಾರಿಕಾಂಬಾ ಜಾತ್ರೆಗಳ ನಂತರ ಅದ್ಧೂರಿಯ ಹೆಗ್ಗಳಿಕೆಗೆ ಪಾತ್ರವಾಗಿರುವುದು ಶಿವಮೊಗ್ಗನಗರದ ಕೋಟೆ ಶ್ರೀ ಮಾರಿಕಾಂಬಾದೇವಿ ಜಾತ್ರೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯ ಹಿಂದೆ ಊರಿನ ಕ್ಷೇಮ, ಜನರ ಕಲ್ಯಾಣಕ್ಕೆ ಶಕ್ತಿ ದೇವತೆಯನ್ನು ಆರಾಧಿಸುವ ಜನಪದ ನಂಬಿಕೆಯೊಂದು ಭಕ್ತಿ ಮತ್ತು ವೈಭವದಿಂದ ನಡೆದುಕೊಂಡು ಬಂದ ಪರಂಪರೆಯೊಂದು ಹಾಸುಹೊಕ್ಕಾಗಿದೆ. ದೂರ್ವಾಸ ಕ್ಷೇತ್ರವೆಂದೆ ಪುರಾಣಗಳಲ್ಲಿ ಕರೆಯಲ್ಪಡುವ ಶಿವಮೊಗ್ಗ ನಗರದ ಕೋಟೆ ಮಾರಿಕಾಂಬೆದೇವಿಯ ಜಾತ್ರೆಗೆ ಶತಮಾನದ ...

Read More »

ಧಗ ಧಗನೆ ಹೊತ್ತಿ ಉರಿದ ಟವೆರಾ ಕಾರು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರು.

    ಸಾಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಟವೆರಾ ಕಾರೊಂದು ಚಾಲನೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ 1.30 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಸಾಗರದ ಕಡೆ ಬರುತ್ತಿದ್ದ ಕಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಟವೆರಾ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು,ಕಾರಿನಲ್ಲಿದ್ದ ಓರ್ವನಿಗೆ ಸಣ್ಣ ಪುಟ್ಟ ಸುಟ್ಟ ಗಾಯವಾಗಿದೆ. ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳಾದ ವಿಲ್ಫ್ರೆಡ್,ಜೆ.ರವಿ,ಪ್ರಕಾಶ್,ರವಿಕುಮಾರ್,ಕುಮಾರಸ್ವಾಮಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇಮ್ರಾನ್ ಸಾಗರ್

Read More »