Breaking News

Tag Archives: Shimoga

ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಭಿನಂದನೆ.

ಶಿವಮೊಗ್ಗ, 72ನೇ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ .ಎಂ.ಕೆ ರವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯಾಗಿರುವ ಅನ್ನಪೂರ್ಣ ಇತ್ತೀಚಿಗೆ ನಡೆದ ಪರೇಡ್ ನಲ್ಲಿ ಭಾಗಿವಹಿಸಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಎನ್ಎಸ್ಎಸ್ ಘಟಕ ಹಾಗೂ ಸ್ಪಂದನಾ ಮಹಿಳಾ ಸಬಲೀಕರಣ ಘಟಕದಿಂದ ಸನ್ಮಾನಿಸಿ, ಗೌರವಿಸಲಾಗಿದೆ. ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಂ.ಸುರೇಶ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಫ್ರೊ.ಕೆ.ಎಂ.‌ನಾಗರಾಜು, ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Read More »

ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ.  ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...

Read More »

ರೌಡಿ ಶೀಟರ್ ಗೋವಿಂದ ಕೊಲೆ‌ ಆರೋಪಿಗಳ ಬಂಧನ

ರೌಡಿ ಶೀಟರ್ ಗೋವಿಂದ ಕೊಲೆ‌ ಆರೋಪಿಗಳ ಬಂಧನ   ಶಿವಮೊಗ್ಗ: ಇಲ್ಲಿನ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ರೌಡಿ ಶೀಟರ್ ಮಾರ್ಕೆಟ್ ಗೋವಿಂದನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜನವರಿ 30 ರಂದು ಮಾರ್ಕೆಟ್ ಗೋವಿಂದನನ್ನು ರೌಡಿ ಶೀಟರ್ ಖರಾಬ್ ಶಿವು ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿ ಬಳಿಕ ತಲೆ ಮರೆಸಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಪೇಟೆ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಪ್ರಕರಣ ನಡೆದು ನಾಲ್ಕು ತಿಂಗಳ ಬಳಿಕ ...

Read More »

ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ

ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ...

Read More »

ಮಲೆನಾಡಲ್ಲೇ ಮಳೆ ಕ್ಷೀಣ

  ಶಿವಮೊಗ್ಗ ಎಂದಾಕ್ಷಣ ಎಲ್ಲರಿಗೂ ಮಲೆನಾಡಿನ ಹೆಬ್ಬಾಗಿಲು ಎಂದು ತಿಳಿದುಕೊಳ್ಳುತ್ತಾರೆ. ಇಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುತ್ತದೆ. ಮಳೆಗಾಲದಲ್ಲಂತೂ ಕುಂಭದ್ರೋಣ ಮಳೆ ಸುರಿಯುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಜೊತೆಗೆ ಕಾಲಕಾಲಕ್ಕೆ ಆಗಬೇಕಾದ ಮಳೆಯೂ ವಾಡಿಕೆಯಷ್ಟು ಆಗುತ್ತಿಲ್ಲ. ಬಾರಿಯ ಮುಂಗಾರು ಪೂರ್ವ ಮಳೆಯನ್ನೇ ಪರಿಗಣನೆಗೆ ತೆಗೆದುಕೊಂಡರೆ ಬರೋಬ್ಬರಿ ಶೇಕಡಾ 77 ರಷ್ಟು ಮಳೆ ಕೊರತೆ ಶಿವಮೊಗ್ಗ ಜಿಲ್ಲೆಯಲಾಗಿದೆ.   ಮುಂಗಾರು ಪೂರ್ವದಲ್ಲಿ ವಾಡಿಕೆಯಷ್ಟು ಮಳೆಯಾಗದೇ ಇರುವುದರಿಂದಾಗಿ ರೈತರು ತಲೆ ಮೇಲೆ ಕೈಹೊತ್ತು ಕೂರಬೇಕಾಗ ದುಸ್ಥಿತಿ ಬಂದೊದಗಿದೆ. ...

Read More »

ಜನಮನ ಸೆಳೆದ ಮಾವು ಹಲಸು ಮೇಳ.

  ಹಣ್ಣುಗಳ ರಾಜ ಮಾವು ಹಾಗೂ ಹಲಸಿನ ಮೇಳವು ಶಿವಮೊಗ್ಗ ದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿಲಾಗಿದೆ.. ರಾಜ್ಯದ ನಾನಾ ಕಡೆಯಿಂದ ಮಾವು ಮತ್ತು ಹಲಸಿನ ವ್ಯಾಪಾರರಿಗಳು ವಿವಿಧ ತರೆವಾರಿ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಕಣ್ಣುಹಾಯಿಸಿದಲ್ಲೆಲ್ಲಾ ಕಾಣುವ ರಸಪುರಿ, ಮಲಗೋವಾ, ತೋತಾಪುರಿ, ಮಲ್ಲಿಕಾ, ಅಲಾನ್ಸೊ, ಬಾದಾಮಿ, ಬಗನಪಲ್ಲಿ, ಲಾಂಗ್ರಾ, ಪ್ರಿನ್ಸಸ್, ವನರಾಜ, ರಾಜಗಿರಿ, ಸಿರಿ, ಆಫೂಸ್, ಕಲ್ಮಿ, ಬೆನಸಾನ್ ತಳಿಯ ಮಾವಿನ ಹಣ್ಣುಗಳು, ಸದಾನಂದ ಹಲಸು, ಬಿ.ಡಿ.ವಿ.ಟಿ. ಹಲಸು, ಕೆಂಪು ರುದ್ರಾಕ್ಷಿ, ಹಳದಿ ರುದ್ರಾಕ್ಷಿ, ಹೇಮಚಂದ್ರ, ಲಾಲ್ಬಾಗ್ ಮಧೂರ, ಮಾಂಕಾಳಿ, ಕೆಂಪು, ಹಲಸು, ವಟಗರ, ...

Read More »

ಪವಿತ್ರ ರಂಜಾನ್ ಆಚರಣೆ

ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಿವಮೊಗ್ಗ ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಅದರಲ್ಲೂ ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಪವಿತ್ರ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೊಸ ಬಟ್ಟೆ ಧರಿಸಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸುತ್ತಿದ್ದುದು ವಿಶೇಷವಾಗಿತ್ತು. ಪ್ರಾರ್ಥನೆ ಬಳಿಕ ಮುಸ್ಲಿಂ ಸಮುದಾಯದ ಬಡವರೂ ಹಬ್ಬವನ್ನು ಸಂತಸದಿಂದ ಆಚರಣೆ ಮಾಡಲಿ ಎಂದು ಉಳ್ಳವರು ದಾನ ಮಾಡುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಶಿವಮೊಗ್ಗ ನಗರ ...

Read More »

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »

ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದಿಂದ ಐಎಂಎ ಹಾಲ್ ವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಜಾಥಾದಲ್ಲಿ ಜಿ.ಮತ್ತು ಸತ್ರ ನ್ಯಾಯಾದೀಶೆ ಶ್ರೀಮತಿ ಪ್ರಭಾವತಿ ಎಂ.ಹಿರೇಮಠ, ಜಿಲ್ಲಾಧಿಕಾರಿ ಕೆ.ದಯಾನಂದ್, ಜಿಲ್ಲಾ ಸಂರಕ್ಷಣಾಧಿಕಾರಿ ಡಾ|| ಎಂ. ಅಶ್ವಿನಿ, ಜಿಲ್ಲಾ ಕಾ.ಸೇ.ಪ್ರಾ. ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಶಮಾ ಬೇಗಂ ಫಕ್ರುದ್ದೀನ್ ವiತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Read More »

ಜೀಪ್ ಹಾಗು ಸ್ಕೂಟಿ ನಡುವೆ  ಅಪಘಾತ ಸ್ದಳದಲೇ  ವಿದ್ಯಾರ್ಥಿನಿ ಸಾವು

ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು 18 ವರ್ಷದ ಸುನೈನಾ ಎಂಬ  ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸುನೈನಾ ನಗರದ ಚನ್ನಪ್ಪ ಲೇಔಟ್ ನಿವಾಸಿಯಾಗಿದ್ದು, ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಹೋಗುವಾಗ  ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು  ಸಮೀಪದ ನಂಜಪ್ಪ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments