Breaking News

Tag Archives: Shivamogga

ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.

ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...

Read More »

ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆ

ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ...

Read More »

ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ.  ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...

Read More »

ನಾಲ್ವರು ಸರಗಳ್ಳರ ಬಂಧನ: ಚಿನ್ನಾಭರಣ ವಶ

  ಶಿವಮೊಗ್ಗ : ಮಹಿಳೆಯೊಬ್ಬರಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸರಗಳ್ಳರನ್ನು ಪೊಲೀಸರು ಬುಧವಾರ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿಕಾರಿಪುರ ಉಪ-ವಿಭಾಗದ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿ ಬಸಮ್ಮ ಕೋಂ ದಿ||ಯಲ್ಲಪ್ಪ ಎಂಬುವವರು ಅಕ್ಟೋಬರ್ 22 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಎರಡು ಜನ ಅಪರಿಚಿತರು ಆಸ್ಪತ್ರೆಯ ಮುಂಭಾಗ ನಕಲಿ ಬಂಗಾರದ ಸರವನ್ನು ತೋರಿಸಿ ಆ ನಕಲಿ ಬಂಗಾರದ ಸರವನ್ನು ಕೊಟ್ಟು ನಂತರ 3,500 ರೂ. ನಗದು ಹಾಗೂ ...

Read More »

ಅವಾಂತರ ಸೃಷ್ಟಿಸಿದ ಅರ್ಧಗಂಟೆ ಮಳೆ

ಶಿವಮೊಗ್ಗ: ಇಂದು ಸಂಜೆ ವೇಳೆ ಅರ್ಧ ಗಂಟೆ ಸುರಿದ ಮಳೆ ಶಿವಮೊಗ್ಗ ನಗರದಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ಕಳೆದ‌ ಮೂರು ದಿನಗಳಿಂದ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗುತ್ತಿದೆ. ಆದರೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರಂಭವಾದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಎಲ್ಲ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ಶಿವಮೊಗ್ಗ ಪಾರ್ಕ್ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆ ಮೇಲೆ ಬರೋಬ್ಬರಿ ಎರಡು ಅಡಿಗೂ ಹೆಚ್ಚು ನೀರು ನಿಂತಿತ್ತು. ಅರ್ಧ ಗಂಟೆ ಸುರಿದ ಧಾರಾಕಾರ ಮಳೆ ...

Read More »

5 ಗಂಟೆಗಳ ಸತತ ಕಾರ್ಯಾಚರಣೆ.ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಗನ ರಕ್ಷಣೆ. 

ಶಿವಮೊಗ್ಗ : ಕೊಡಚಾದ್ರಿ ಹಿಡ್ಲಮನೆ ಜಲಪಾತ ನೋಡಲು ಬಂದು ಪ್ರಪಾತದಿಂದ 80 ಅಡಿಗಳ ಮೇಲೆ ಸಿಲುಕಿಕೊಂಡ ಅಮೋಘ (29) ಎಂಬ ಯುವಕನನ್ನು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿದಂತೆ 50ಕ್ಕೂ ಹೆಚ್ಚು ಜನರ ತಂಡ ಸತತ 5 ಗಂಟೆಗಳ ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಸನ ಮೂಲದ ಅಮೋಘ ತಮಿಳುನಾಡು ಮೂಲದ ಸಂಜೀವ್ ಕಪೂರ್ ಮೂಲದ ಮಧು ಎಂಬುವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದು ಹೋಂಸ್ಟೇನಲ್ಲಿ ತಂಗಿದ್ದರು. ಬೆಳಿಗ್ಗೆ ಜೀಪಿನಲ್ಲಿ ಕೊಡಚಾದ್ರಿ ಗಿರಿ ಹತ್ತಿ ...

Read More »

ಸಿಗಂದೂರಲ್ಲಿ ನಡೆದ ಘಟನೆ ಶೋಭೆ ತರುವಂತದ್ದಲ್ಲ – ಸಿಎಂ

ಶಿವಮೊಗ್ಗ: ಸಿಗಂದೂರಿನಲ್ಲಿ ಎರಡು ದಿನದ ಹಿಂದೆ ನಡೆದಿರುವ ಘಟನೆ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಜಿಲ್ಲಾಧಿಕಾರಿ ಸಿಗಂದೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಯಿಂದ ಸಿಗಂದೂರು ದೇವಾಲಯದ ಘಟನೆ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಜೊತೆಗೆ ದೇವಾಲಯದ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದರು.

Read More »

ಮೂವರು ದರೋಡೆಕೋರರ ಬಂಧನ, ಕೃತ್ಯಕ್ಕೆ ಬಳಸಿದ ಓಮಿನಿ ವಾಹನ ವಶ

  ಶಿವಮೊಗ್ಗ : ಅಕ್ಟೋಬರ್ 14ರಂದು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ್ದ ಮೂವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಮನೆಯಲ್ಲಿರುವ ಸಮಯದಲ್ಲಿ ಯಾರೋ 05 ಜನ ದರೋಡೆಕೋರರು ಮನೆಗೆ ನುಗ್ಗಿ, ತಮ್ಮ ಕೊರಳಿನಲ್ಲಿದ್ದ ಬಂಗಾರದ ಗುಂಡುಗಳಿದ್ದ ತಾಳಿ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿಗಳ ಪತ್ತೆಗಾಗಿಶ್ರೀನಿವಾಸಲು IPS, ಎ.ಎಸ್.ಪಿ ಶಿಕಾರಿಪುರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿಮರುಳಸಿದ್ದಪ್ಪ ಪೊಲೀಸ್ ...

Read More »

ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯ 271ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್‍ಗೆ ತಲಾ 20ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್‍ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ...

Read More »

ಶಿವಮೊಗ್ಗದಲ್ಲಿ ಗಾಂಧೀಜಿ ಅವರ ಕುರುಹುಗಳೇನು ಗೊತ್ತಾ ??

  ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ‌ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು.‌ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ‌ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ‌ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ‌ ಬಾ ಅವರು 1927ರ ಆಗಸ್ಟ್ 14 ರಂದು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments