Breaking News

Tag Archives: Shivamogga

ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೇ ಕದ್ದ ಖದೀಮ.

  ಶಿವಮೊಗ್ಗ: ಮಾಸ್ಕ ಹಾಕದೆ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹೊಸನಗರ ಠಾಣೆ ಪೊಲೀಸರು ದಂಡ ವಿಧಿಸಿದ್ದರು. ಆದರೆ ದಂಡ ಕಟ್ಟಿದ ಸಿಟ್ಟಿಗೆ ಆತ ಪೊಲೀಸರ ಬೈಕನ್ನೇ ಕದ್ದು ಪರಾರಿಯಾಗಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೌದು ಚೇತನ್ ಎಂಬಾತ ಮಾಸ್ಕ್ ಹಾಕದೆ ಓಡಾಡುತ್ತಿದ್ದಾಗ ಪೊಲೀಸರು ಆತನನ್ನು ಹೊಸನಗರ ಪೊಲೀಸ್ ಠಾಣೆಗೆ ಕರೆತಂದು ದಂಡ ವಿಧಿಸಿದ್ದಾರೆ. ದಂಡ ಪಾವತಿಸಿ ಹೊರಬಂದ ಚೇತನ್ ಪೊಲೀಸ್ ಠಾಣೆ ಪಕ್ಕದಲ್ಲೇ ನಿಲ್ಲಿಸಿದ್ದ ಪೊಲೀಸ್ ಪೇದೆ‌ ರಾಘವೇಂದ್ರ ಅವರ ಬೈಕ್ ಕದ್ದು ಪರಾರಿಯಾಗಿದ್ದಾನೆ. ಈ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ...

Read More »

ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ಶಿವಮೊಗ್ಗ ನಂಬರ್ ಓನ್

  ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳಿಗೂ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಹಿಂಬಾಲಕರನ್ನು ವೃದ್ಧಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ ಓನ್ ಸ್ಥಾನಕ್ಕೆ ಏರಿದೆ. ಜುಲೈ 16 ರಿಂದ ಸೆಪ್ಟಂಬರ್ 15 ರವರೆಗಿನ ಅವಧಿಯಲ್ಲಿ ಯಾರು ಹೆಚ್ಚು ಫೇಸ್ ಬುಕ್ ಹಿಂಬಾಲಕರನ್ನು ಹೊಂದುತ್ತಾರೆಯೋ ಅವರು ಪ್ರಥಮ ಸ್ಥಾನ ಪಡೆಯುತ್ತಾರೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿತ್ತು. ಅದರಂತೆ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ...

Read More »

ಈ ಬಾರಿ ಅತ್ಯಂತ ಸರಳವಾಗಿ ದಸರ ಆಚರಣೆ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿರಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು. ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ: ಚಂದ್ರಶೇಖರ ಆಜಾದ್ ...

Read More »

ಮರಕ್ಕೆ ಕಾರ್ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು.

ಶಿವಮೊಗ್ಗ : ಶಿವಮೊಗ್ಗ ದಿಂದ N R ಪುರಕ್ಕೆ ತೆರಳುತ್ತಿದ್ದ ಸೆಲೆರಿಯೋ ಕಾರು ಕಾಚಿನಕಟ್ಟೆಯ ಬಳಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರನ್ನ ಕಟ್ ಮಾಡುವ ಮೂಲಕ ಕಾರಿನಲ್ಲಿದ್ದ ಜನರನ್ನು ಹೊರಗೆ ತೆಗೆಯಲಾಯಿತು. ಇವರನ್ನೆಲ್ಲ ಎನ್ಆರ್ ಪುರ ನಿವಾಸಿಗಳು ಎಂದು ಹೇಳಲಾಗಿದೆ. ಆದರೆ ಯಾವುದೇ ನಿಖರವಾದ ಮಾಹಿತಿಗಳು ದೊರೆತಿಲ್ಲ. ತುಂಗಾ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲಂಚ ಸ್ವೀಕರಿಸುವಾಗ ಗ್ರಾಮ‌ ಪಂಚಾಯತ್ ಕಾರ್ಯದರ್ಶಿ ಎಸಿಬಿ‌ ಬಲೆಗೆ.

  ಶಿಕಾರಿಪುರ : ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಪಂಚಾಯತ್ ನ ಕಾರ್ಯದರ್ಶಿ ಶಿವಪ್ಪ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದಿದ್ದಾರೆ. ಇಂದು ಮಾಧ್ಯಹ್ನ ಗ್ರಾಮ ಪಂಚಾಯತಿ ಕಛೇರಿಯಲ್ಲಿ NREG ಕೆಲಸದ 2,10,000 ಹಣವನ್ನು ಬಿಡುಗಡೆ ಮಾಡುವ ವಿಚಾರವಾಗಿ ಮಂಜುನಾಥ ಎಂಬುವರ ಬಳಿ 8,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ನೇರವಾಗಿ ಎಸಿಬಿ ಡಿವೈಎಸ್ ಪಿ ಲೋಕೇಶ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Read More »

ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.

  ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ. ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Read More »

ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಣೆ. Exclusive video.

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಜೋಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರು ಇಂದಿರಾನಗರದ ಚೇತನ್ ಕುಮಾರ್ ಎಂಬಾತ ಅಪಾಯದ ಸ್ಥಳವಾಗಿರುವ ರಾಣಿ ಫಾಲ್ಸ್‌ ಮೇಲೆ ಹೋಗಿ ಕುಳಿತಿದ್ದ. ವಿಷಯ ತಿಳಿದ ಪೊಲೀಸರು ಮೂರು ಗಂಟೆಗಳ ಕಾಲ‌ ಚೇತನ್ ಕುಮಾರ್ ಮೇಲೆ‌ ನಿಗಾ ಇರಿಸಿ ಸಾಗರದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಜೋಗಕ್ಕೆ ಬಂದ ಬಳಿಕ ಚೇತನ್ ಕುಮಾರ್ ನನ್ನು ರಕ್ಷಿಸಿ ಕರೆದುಕೊಂಡು ಬಂದಿದ್ದಾರೆ. ಈ ಸಂಬಂಧವಾಗಿ ಜೋಗ ಪೊಲೀಸ್ ಠಾಣೆಯಲ್ಲಿ ...

Read More »

ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟ D.Boss. ಇನ್ನೂ ಒಂದೆರೆಡು ದಿನ ಶಿವಮೊಗ್ಗದಲ್ಲಿ ಪ್ರವಾಸ

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇವತ್ತು ನಟರ ಟೀಮ್ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಲಿದೆ. ಮಧ್ಯಾಹ್ನದವರೆಗೆ ಸಫಾರಿಯಲ್ಲಿ ಭಾಗವಹಿಸಲಿದ್ದಾರೆ. ಅಭಯಾರಣ್ಯದ ಮಧ್ಯದಲ್ಲಿರುವ ಬ್ರಿಟೀಷರ ಕಾಲದ ಬಂಗಲೆಯಲ್ಲಿ ...

Read More »

15 ದಿನದ ನವಜಾತ ಶಿಶುವಿನ ಮಾರಾಟಕ್ಕೆ ಯತ್ನ

  ಶಿವಮೊಗ್ಗ : ಟಿಪ್ಪು ನಗರದಲ್ಲಿ 15 ದಿನದ ನವಜಾತ ಶಿಶುವನ್ನು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳನ್ನು ತುಂಗಾ ನಗರ ಪೊಲೀಸ್ ಠಾಣೆಯ ಪೋಲಿಸರು ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ಲಕ್ಷದ 50 ಸಾವಿರ ರೂಪಾಯಿಗೆ ಮಗುವನ್ನು ಮಾರಟ ಮಾಡಲು ಯತ್ನಿಸಿದ್ದ ಶೈಲ, ಸುಮಾ, ತುಳಸಿ, ಉಷಾ ಹಾಗೂ ಷಣ್ಮುಗ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀನಿವಾಸ್ ಮತ್ತು ಉಷಾ ದಂಪತಿಗಳಿಗೆ ಕಳೆದ 15 ದಿನಗಳ ಹಿಂದೆ ಗಂಡು ಮಗುವಾಗಿದೆ. ಬಡತನದ ಹಿನ್ನೆಲೆಯಲ್ಲಿ ಈ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದು ಒಂದು ಒಳ್ಳೆಯ ...

Read More »

ಕೆಲವು ವಾರ್ಡ್‍ಗಳು ಪೂರ್ಣ ಸೀಲ್‍ಡೌನ್

  ಶಿವಮೊಗ್ಗ : ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ ಜಿಲ್ಲೆಯಾದ್ಯಂತ ಇಂದಿನಿಂದ ಲಾಕ್‍ಡೌನ್ ತೆರವುಗೊಳಿಸಲಾಗಿದ್ದು, ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5ರವರೆಗೆ ಮಾತ್ರ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿರುವ ಹಳೆ ಶಿವಮೊಗ್ಗ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಜುಲೈ 23ರ ಬೆಳಿಗ್ಗೆ 5ರಿಂದ ಜುಲೈ 29ರ ರಾತ್ರಿ 9ಗಂಟೆಯವರೆಗೆ ಸಂಪೂರ್ಣ ಸೀಲ್‍ಡೌನ್ ಇರಲಿದೆ ಎಂದು ಸ್ಪಷ್ಟಪಡಿಸಿದರು. ಹಳೆ ಶಿವಮೊಗ್ಗ ಕ್ಲಸ್ಟರ್‍ನಲ್ಲಿ ಬರುವ ವಾರ್ಡ್ ಸಂಖ್ಯೆ 22, 23, 29 ಮತ್ತು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments