ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »Tag Archives: Sucide
ನೇಣು ಹಾಕಿಕೊಂಡು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ರೋಗಿ.
Cnewstv.in / 09.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ : ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಗದೀಶ್ (51) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಎಲ್ಲಾ ಮಲಗಿದ್ದಾಗ ಆಸ್ಪತ್ರೆಯ ಮೆಟ್ಟಿಲುಗಳಿಗೆ ಅಳವಡಿಸಿದ್ದ ಸರಳುಗಳಿಗೆ ಲುಂಗಿ ಬಳಸಿ ನೇಣು ಹಾಕಿಕೊಂಡಿದ್ದಾರೆ. ಈ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ. ಇದನ್ನು ಒದಿ : https://cnewstv.in/?p=5363 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv