ಶಿವಮೊಗ್ಗ: ಕಾಶೀಪುರ ಬಡಾವಣೆಯ ಮನೆಯೊಂದರ ನೀರಿನ ತೊಟ್ಟಿಯಲ್ಲಿ ಬರೋಬ್ಬರಿ 63 ನೀರು ಹಾವಿನ( ವಾಟರ್ ಸ್ನೇಕ್) ಮರಿಗಳು ಪತ್ತೆಯಾಗಿವೆ. ಉರಗ ತಜ್ಞ ಶಿವಮೊಗ್ಗದ ಸ್ನೇಕ್ ಕಿರಣ್ ಎರಡು ದಿನಗಳ ಕಾಲ ಕಾರ್ಯಚರಣೆ ನಡೆಸಿ, ಹಾವಿನ ಮರಿಗಳನ್ನು ರಕ್ಷಿಸಿದ್ದಾರೆ. ಕಾಶೀಪುರ ಬಡಾವಣೆಯ ಪಶುವೈದ್ಯಕೀಯ ಕಾಲೇಜು ರಸ್ತೆಯ ಎಸ್.ಈಶ್ವರಯ್ಯ ಎಂಬುವರ ಮನೆಯ ನೀರಿನ ತೊಟ್ಟಿಯಲ್ಲಿ ಹಾವಿನ ಕೆಲವು ಮರಿಗಳು ಪತ್ತೆಯಾಗಿವೆ. ಇದನ್ನ ಗಮನಿಸಿದ ಮನೆಯವರು ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದರು. ಬಳಿಕ ಆಗಮಿಸಿರುವ ಕಿರಣ್ ಮತ್ತೊಮ್ಮೆ ನೀರಿನ ಸಂಪ್ ಗಮನಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಾವಿನ ಮರಿಗಳು ...
Read More »Tag Archives: Wild animal attack
ಕಾಡಾನೆ ಬಳಿಕ ಚಿರತೆ ಹಾವಳಿ: ಗುಬ್ಬಿಗಾ ಗ್ರಾಮದಲ್ಲಿ ನಾಯಿ ಹೊತ್ತೊಯ್ದ ಚಿರತೆ
ಶಿವಮೊಗ್ಗ: ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೊಯ್ದಿರುವ ಘಟನೆ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ನಾಯಿಯನ್ನು ಎತ್ತಿಕೊಂಡು ಹೋಗಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲ ಬಳಿಯೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇಂದು ಬೆಳಿಗ್ಗೆ ನಾಯಿ ಕಾಣಿಸದಿರುವಾಗ ಮನೆಯ ಸಿಸಿ ಕ್ಯಾಮರವನ್ನು ಪರಿಶೀಲಿಸಿದ್ದು, ಚಿರತೆ ಬಂದು ನಾಯಿಯನ್ನು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ. ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಆನೆಗಳ ...
Read More »
C News TV Kannada News Online in cnewstv